ಇತಿಹಾಸ ಪ್ರಸಿದ್ಧ ಪೆದ್ದಪಲ್ಲಿ ಗಂಗಮ್ಮ ಜಾತ್ರೆ ಅದ್ದೂರಿಯಾಗಿ ನಡೆಯಿತು
ಕೆಜಿಎಫ್: ನಗರದ ಪೆದ್ದಪಲ್ಲಿ ಗ್ರಾಮದಲ್ಲಿ ನೆಲಗೊಂಡಿರುವ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ಗಂಗಮ್ಮದೇವಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ದೇವಾಲಯ ಮುಜರಾಯಿ ಇಲಾಖೆಗೆ ಸೇರಿರುವುದರಿಂದ ಘನ ಸರ್ಕಾರದಿಂದ ರಥೋತ್ಸವಕ್ಕೆ ಅಧಿಕಾರಿಗಳು ಚಾಲನೆ ನೀಡಿದರು.
ದೇವಾಲಯದಲ್ಲಿ ಬೆಳಗ್ಗೆಯಿಂದ ತಬ್ಬಿಟ್ಟು ದೀಪಗಳನ್ನು ಭಕ್ತಾದಿಗಳು ಬೆಳಗಿಸಿದರು.
ದೇವರ ಮೂಲ ವಿಗ್ರಹಕ್ಕೆ ವಿಶೇಷವಾದ ಹೂಗಳಿಂದ ಅಲಂಕಾರವನ್ನು ಮಾಡಲಾಗಿತ್ತು. ದೇವರ ದರ್ಶನ ಪಡೆಯಲು ಆಂಧ್ರ. ತಮಿಳ್ ನಾಡು. ಕರ್ನಾಟಕದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು. ರಥೋತ್ಸವಕ್ಕೆ ಭಕ್ತಾದಿಗಳು ದವನ. ಉಪ್ಪು. ಬಾಳೆಹಣ್ಣು . ಮೆಣಸು. ಎಸೆದು ಭಕ್ತಿಯಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿತ್ತು. ದೇವಾಲಯ ಆಡಳಿತ ಮಂಡಳಿ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳಾದ ಉಪ. ತಹಶೀಲ್ದಾರ್. ಮಂಜುನಾಥ್. ಆರ್ ಐ. ಚಂದ್ರಮೋಹನ್. ವಿ ಎ. ವಿನೋತ್. ಸರ್ಕಲ್ ಇನ್ಸ್ಪೆಕ್ಟರ್ ಗಳಾದ. ಮಾರ್ಕುಂಡಯ್ಯ. ನವೀನ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
