ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭ

Jun 12, 2026 - 08:41
 0  35
ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಕಾರ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟ.

ಬೆಂಗಳೂರು: ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಹಕಾರದೊಂದಿಗೆ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟವನ್ನು ಮುಖ್ಯ ಅತಿಥಿಗಳಾಗಿ ಎಂ.ಎಸ್.ಎಂ.ಇ.ಡೇವಲ್ ಮೆಂಟ್ ಅಧಿಕಾರಿ ದೇವರಾಜ್ ಕೆ. ಬಿ.ಬೆಂಜಮಿನ್ ಭಾಸ್ಕರ್, ಸೆಲ್ವಮುತ್ತು, ಶ್ರೀನಾಥ್, ಎಸ್.ಕೆ.ಹುಸೇನ್, ಜಾನ್ ಅಮರ್ ರಾಜ್, ರಿನಿ ರಾವಲ್, ದಿವ್ಯರವಿ , ಅಧ್ಯಕ್ಷರಾದ ಹೆಚ್.ವಿ.ಕೃಷ್ಣಪ್ಪರವರು, ಕಾರ್ಯದರ್ಶಿ ಎ.ಜಗದೀಶ್ ರವರು ಉದ್ಘಾಟನೆ ಮಾಡಿದರು.

 ಕೆ.ದೇವರಾಜ್ ರವರು ಮಾತನಾಡಿ ನಮ್ಮ ಇಲಾಖೆಯ ವತಿಯಿಂದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮೇಳಕ್ಕೆ ನಾವು ಸಹಕಾರ ಕೊಡುತ್ತಿದ್ದೇವೆ.

ಪೋಟೋ ಮತ್ತು ವಿಡಿಯೊ ಡೊಡ್ಡ ಉದ್ಯಮವಾಗಿದೆ. ಪ್ರತಿಯೊಬ್ಬ ಪೋಟೋ ಮತ್ತು ವಿಡಿಯೊಗ್ರಾಫರ್ಸ್ ಗಳಿಗೆ ಎಂ.ಎಸ್.ಎಮ್.ಇ.ಇಲಾಖೆಗೆ ಭೇಟಿ ಮಾಡಿ ವಿವಿಧ ಯೋಜನೆಗಳ ಸಹಾಯ ಪಡೆದುಕೊಳ್ಳಿ. ವಿವಿಧ ಜಿಲ್ಲೆಗಳಲ್ಲಿ ಈ ರೀತಿಯ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ನಮ್ಮ ಇಲಾಖೆ ಸಹಕಾರ ನೀಡುತ್ತದೆ ಎಂದು ಹೇಳಿದರು.

ಅಧ್ಯಕ್ಷರಾದ ಹೆಚ್.ವಿ. ಕೃಷ್ಣಪ್ಪರವರು ಮಾತನಾಡಿ ಕರ್ನಾಟಕ ಪೋಟೋ ಮತ್ತು ವಿಡಿಯೋಗ್ರಾಫರ್ಸ್ ಗಳು ಆನೇಕ ಸಮಸ್ಯೆಗಳಿಂದ ಎದುರುಸುತ್ತಿದ್ದಾರೆ. ಅವರ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ನಿಗಮ ಮಂಡಳಿ ರಚಿಸಬೇಕು.

ಪೋಟೋ ಮತ್ತು ವಿಡಿಯೋಗಳು ಸಾಕ್ಷಿಯಾಗಿ ಜೀವಂತ ಪರಿಯಂತ ನಮ್ಮ ಜೊತೆಯಲ್ಲಿ ಒಂದು ಪೋಟೋ ನೂರು ಮಾತುಗಳು ಹೇಳುತ್ತದೆ. ಪ್ರಧಾನಿಯಿಂದ ಹಿಡಿದು ಮುಖ್ಯಮಂತ್ರಿ ಹಾಗೂ ಎಲ್ಲ ಜನರಿಗೆ ಪೋಟೋ , ವಿಡಿಯೊಗಳು ತುಂಬಾ ಅವಶ್ಯಕತೆ ಇದೆ. ಸಭೆ, ಸಮಾರಂಭ ಪ್ರಚಾರ, ಮದುವೆ, ಮುಂಜಿ ಎಲ್ಲ ಸಮಾರಂಭಗಳಿಗೆ ನಮ್ಮ ಅವಶ್ಯಕತೆ ತುಂಬಾ ಇರುತ್ತದೆ. ತಂತ್ರಜ್ಞಾನ ಬೆಳಯುತ್ತಿದೆ ಅದನ್ನ ಪರಿಚಯಿಸಲು ಪ್ರದರ್ಶನ ಮಾರಾಟ ಮೇಳ ಮೂರು ದಿನಗಳ ಆಯೋಜಿಸಲಾಗಿ

ತ್ತು.

What's Your Reaction?

like

dislike

love

funny

angry

sad

wow

Suddi Kirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268, 9686665456 #suddikiranatv #suddikiranaott