ಕಳವು ಮೊಬೈಲ್ಗಳ ಪತ್ತೆ ವಾರಸುದಾರರಿಗೆ ಹಸ್ತಾಂತರ
ಕೆಜಿಎಫ್,ಜು.೨೧: ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕಳುವಾಗಿದ್ದ ಹಾಗೂ ಸಿಇಐಆರ್ ತಂತ್ರಾಂಶದಲ್ಲಿ ದೂರು ದಾಖಲಾಗಿದ್ದ ೨೧ ಮೊಬೈಲ್ ಪೋನ್ಗಳನ್ನು ಸಿಇಎನ್ ಕ್ರೈಂ ಪೊಲೀಸ್ ಠಾಣಿಯ ಪೊಲೀಸರು ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಿಇಎನ್ ಕ್ರೈಂ ಪೊಲೀಸ್ ಠಾಣೆ ವತಿಯಿಂದ ಸಿಇಐಆರ್ ಪೋರ್ಟಲ್ (ಕೇಂದ್ರೀಯ ಸಲಕರಣೆಗಳ ಗುರುತಿನ ನೋಂದಣಿ) (Central Equipment Identity Register) ನಲ್ಲಿ ದಾಖಲಾಗಿದ್ದ ಮೊಬೈಲ್ ಪೋನ್ ಕಳವು ಬಗ್ಗೆ ತನಿಖೆ ಹಾಗೂ ವಿಶೇಷ ಕಾರ್ಯಾಚರಣೆ ನಡೆಸಿ ದೇಶದ ವಿವಿಧ ರಾಜ್ಯಗಳಲ್ಲಿ ಇದ್ದಂತಹ ೨೧ ಕಳವು ಮೊಬೈಲ್ಗಳನ್ನು ಪತ್ತೆ ಮಾಡಿ, ವಾರಸುದಾರರನ್ನು ಬರಮಾಡಿಕೊಂಡು, ಅವರವರ ಮೊಬೈಲ್ ಪೋನ್ಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಶಿವಾಂಶು ರಜಪೂತ್ ಅವರ ಸಮಕ್ಷಮ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಮಾತನಾಡಿ, ಯಾರೇ ಆಗಲಿ ಮೊಬೈಲ್ ಪೋನ್ಗಳನ್ನು ಕಳೆದುಕೊಂಡಲ್ಲಿ ಕೂಡಲೇ ಸಿ.ಇ.ಐ.ಆರ್. ಪೋರ್ಟಲ್ನಲ್ಲಿ ದೂರನ್ನು ದಾಖಲಿಸುವಂತೆ ಕರೆ ನೀಡಿದರು. ಇದರಿಂದಾಗಿ ಕಳುವಾದ ಮೊಬೈಲ್ ಪೋನ್ಗಳು ಪತ್ತೆಯಾಗುವುದಲ್ಲದೇ, ಬೇರೆಯವರು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಬಹುದೆಂದು ಈ ಕುರಿತು ಅಗತ್ಯ ತಿಳುವಳಿಕೆಗಳನ್ನು ನೀಡಿ ಅರಿವು ಮೂಡಿಸಿದರು.
೨೧ ಕಳವು ಮೊಬೈಲ್ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾದ ಸಿಇಎನ್ ಪಿಐ ಲಕ್ಷ್ಮಿನಾರಾಯಣ ಮತ್ತು ಸಿಬ್ಬಂದಿ ಮಣಿಕಂಠ ಅವರ ಕಾರ್ಯವೈಖರಿಯನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
ಚಿತ್ರಶೀರ್ಷಿಕೆ: ೨೧ ಕೆಜಿಎಫ್೦೧: ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕಳುವಾಗಿದ್ದ ಮೊಬೈಲ್ ಪೋನ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಚಿತ್ರದಲ್ಲಿ ಎಸ್ಪಿ ಶಿವಾಂಶು ರಜಪೂತ್ ಮತ್ತು ಸಿಇಎನ್ ಇನ್ಸ್ಪೆಕ್ಟರ್ ಲಕ್ಷ್ಮೀನಾರಾಯಣ, ಇತರರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
