ಕುಂದೂರು ಮಠ ಪ್ರಾಥಮಿಕ ಕೃಷಿಪತ್ತಿನ ಸಂಘದ ಅಧ್ಯಕ್ಷರಾಗಿ ಡಿ.ಟಿ.ಸತೀಶ್ ಆಯ್ಕೆ

Mar 4, 2026 - 16:46
 0  93
ಕುಂದೂರು ಮಠ ಪ್ರಾಥಮಿಕ ಕೃಷಿಪತ್ತಿನ ಸಂಘದ ಅಧ್ಯಕ್ಷರಾಗಿ ಡಿ.ಟಿ.ಸತೀಶ್ ಆಯ್ಕೆ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಚನ್ನರಾಯಪಟ್ಟಣ: ತಾಲ್ಲೂಕಿನ ದಂಡಿಗನಹಳ್ಳಿ ಹೋಬಳಿ, ಕುಂದೂರು ಮಠದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ನಿರ್ದೇಶಕ ದೊಡ್ಡಕರಡೇವು ಗ್ರಾಮದ ಡಿ.ಟಿ.ಸತೀಶ್‌ರವರು ಅವಿರೋಧವಾಗಿ ಆಯ್ಕೆಯಾದರು.

ಕುಂದೂರು ಮಠದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಈ ಹಿಂದೆ ಅಧ್ಯಕ್ಷರಾಗಿದ್ದ ಬಿ.ಆರ್.ಹರೀಶ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತ್ತು. ಡಿ.ಟಿ.ಸತೀಶ್ ಹೊರತುಪಡಿಸಿ ಬೇರೆ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದೆ ಇದುದ್ದರಿಂದ ಇವರ ಆಯ್ಕೆಯನ್ನು ಚುನಾವಣಾಧಿಕಾರಿ ವಿಜಯೇಂದ್ರ ಘೋಷಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಡಿ.ಟಿ.ಸತೀಶ್ ಮಾತನಾಡಿ, ಪ್ರಸ್ತುತ ಸಂಘದಲ್ಲಿ ವ್ಯಾಪ್ತಿಗೆ ಒಳಪಡುವ ೧೩೫೦ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ೭.೫ ಕೋಟಿ ರೂ. ಸಾಲ ಮತ್ತು ೧೬ ಸ್ತ್ರೀಶಕ್ತಿ ಸಂಘಗಳಿಗೆ ೫೦ ಲಕ್ಷ ರೂ. ಸಾಲ ನೀಡಲಾಗಿದೆ. ಸಾಲ ತೀರುವಳಿಯೂ ಶೇ.೧೦೦ರಷ್ಟಿದ್ದು, ಮುಂಬರುವ ದಿನಗಳಲ್ಲಿ ಹೊಸ ರೈತರಿಗೆ ಸಾಲ ನೀಡಲು ಕ್ಷೇತ್ರದ ಶಾಸಕರಾದ ಹೆಚ್.ಡಿ.ರೇವಣ್ಣನವರು, ಮತ್ತು ವಿಧಾನಪರಿಷತ್ತು ಸದಸ್ಯರು ಹಾಗೂ ಆಪೆಕ್ಸ್ ಬ್ಯಾಂಕ್ ನಿದೇಶಕರಾದ ಡಾ.ಸೂರಜ್ ರೇವಣ್ಣನವರ ಸಹಕಾರ ಕೋರಲಾಗುತ್ತದೆ. ಜೊತೆಗೆ ಸಂಘದ ಬಲವರ್ಧನೆಗೆ ಹೆಚ್ಚು ಶ್ರಮಿಸುವುದಾಗಿ ತಿಳಿಸಿದ ಅವರು ತಮ್ಮನ್ನು ಸಂಘಕ್ಕೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸಂಘದ ಉಪಾಧ್ಯಕ್ಷರು, ಸೇರಿ ಎಲ್ಲ ನಿರ್ದೇಶಕರು ಮತ್ತು ಅರ್ಶಿವದಿಸಿದ ಶಾಸಕರಾದ ಹೆಚ್.ಡಿ.ರೇವಣ್ಣ ಹಾಗೂ ಡಾ.ಸೂರಜ್ ರೇವಣ್ಣನವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ನಿರ್ದೇಶಕ ನಟ್ಟೇಕೆರೆ ನಾಗರಾಜು, ತಾ.ಪಂ.ಮಾಜಿ ಸದಸ್ಯ ಗ್ಯಾರಹಳ್ಳಿ ರವೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ರಂಗಸ್ವಾಮಿ, ಮಾಜಿ ನಿರ್ದೇಶಕ ಸತೀಶ್, ದೊಡ್ಡಕರಡೇವು ಗ್ರಾ.ಪಂ.ಮಾಜಿ ಅಧ್ಯಕ್ಷ ಮಧುಕರಡೇವು, ಬಳದರೆ ಗ್ರಾ.ಪಂ.ಮಾಜಿ ಅಧ್ಯಕ್ಷ ಅನಂತ್‌ಕುಮಾರ್, ಅರಣ್ಯ ಸಮಿತಿ ಸದಸ್ಯ ವೆಂಕಟರಮಣ ಸ್ವಾಮಿ, ಸಂಘದ ಉಪಾಧ್ಯಕ್ಷ ಡಿ.ಜಗದೀಶ್, ನಿರ್ದೇಶಕರುಗಳಾದ ಬಿ.ಆರ್.ಹರೀಶ್, ನಿಂಗೇಗೌಡ, ಸಿ.ಎಂ.ಮಂಜುನಾಥ್, ಡಿ.ಎಲ್.ಸೋಮಶೇಖರ್, ಸಣ್ಣೇಗೌಡ, ಜಯಲಕ್ಷಮ್ಮ ಕಾಳೇಗೌಡ, ಸುಶೀಲಮ್ಮ ಅಣ್ಣೇಗೌಡ, ಬ್ಯಾಂಕ್ ನಾಮಿನಿ ಎಸ್.ಕೆ.ಅಭಿಲಾಷ್, ಕಾರ್ಯನಿರ್ವಹಣಾಧಿಕಾರಿ ಕೀರ್ತಿಕುಮಾರ್, ಮುಖಂಡರಾದ ಉದ್ಯಮಿ ರವಿಗೌಡ, ಚಂದ್ರೇಗೌಡ, ದಿನೇಶ್, ನಂಬಿಹಳ್ಳಿ ಆನಂದ್, ಬಿ.ಎನ್.ನಾಗೇಂದ್ರ, ಸೇರಿ ಸಂಘದ ಸಹ ಕಾರ್ಯದರ್ಶಿ ಮಂಜುನಾಥ್, ಸಿಬ್ಬಂದಿಗಳಾದ ಸ್ಮಿತಾ, ಭಾಗ್ಯಮ್ಮ ಹಾಜರಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456