ಕೆಜಿಎಫ್ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಸ್ವಾತಿ ನಕ್ಷತ್ರ ಪೂಜೆ

Jun 6, 2025 - 16:36
 0  5
ಕೆಜಿಎಫ್ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಸ್ವಾತಿ ನಕ್ಷತ್ರ ಪೂಜೆ

ಕೆಜಿಎಫ್: ಕೆಜಿಎಫ್ ನಗರದ, ಸ್ವಾಮಿನಾಥ ಪುರಂ, ಕೋರಮಂಡಲ್ ಪ್ರದೇಶದ ಓಟ್ ಲೈನ್ ನಲ್ಲಿರುವ  ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ  ಇಂದು  ಶನಿವಾರ ಸ್ವಾತಿ ನಕ್ಷತ್ರ ಪೂಜೆಯನ್ನು ಯೋಜಿಸಲಾಗಿದೆ. ಪೂಜೆ ಪ್ರಯುಕ್ತ  ಲಕ್ಷ್ಮೀನಾರಾಯಣ ಹೋಮ, ಮಹಾ ಅಭಿಷೇಕ ಮತ್ತು ಮಹಾ ಮಂಗಳಾರತಿಗಳನ್ನು ಪರಿಣಿತ ಋತ್ವೀಕರು ಶ್ರದ್ಧಾ ಭಕ್ತಿಗಳಿಂದ ನಡೆಸಿ ಕೊಡುವರು. ಮಧ್ಯಾಹ್ನ ಅನ್ನದಾಸೋಹವನ್ನು  ಏರ್ಪಡಿಸಲಾಗಿದೆ.

 ಪೌರ್ಣಮಿ ಪೂಜೆ :  ಜೂನ್ 10, ಮಂಗಳವಾರದಂದು ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪಕ್ಕದಲ್ಲೇ ಇರುವ ತಿರುವೆಂಗಡ ಮುಡಯನ್, ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪೌರ್ಣಮಿ ಪೂಜೆಯನ್ನು ಏರ್ಪಡಿಸಲಾಗಿದೆ. ಪದ್ಧತಿಯಂತೆ ಬೆಳಿಗ್ಗೆ ಸುಪ್ರಭಾತ, ವಿಷ್ಣುಸಹಸ್ರನಾಮ ಪಠಣ, ನಂತರ ಹೋಮ, ಅಭಿಷೇಕ ಮುಂತಾದ   ಪೂಜಾ ವಿಧಿವಿಧಾನಗಳು ನಡೆಯಲಿವೆ. ಭಕ್ತರು ಆಗಮಿಸಿ ದೇವರ ಆಶೀರ್ವಾದ ಪಡೆಯುವಂತೆ  ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಮಹೇಂದ್ರನ್ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮನವಿ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456