ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ: ತೇಜಸ್ವಿ

Sep 29, 2025 - 17:08
 0  10
ಚಾ.ಬೆಟ್ಟದಲ್ಲಿ ಅಪಘಾತ;ಗಾಯಾಳುಗಳಿಗೆ 1 ಲಕ್ಷ ರು ಚಿಕಿತ್ಸಾ ವೆಚ್ಚ ನೀಡಿ: ತೇಜಸ್ವಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಕೆಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಒಂದು ಲಕ್ಷ ರೂ ಚಿಕಿತ್ಸಾ ವೆಚ್ಚ ನೀಡಬೇಕೆಂದು ಸರ್ಕಾರವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಬಸ್ ಚಾಲಕನ ನಿರ್ಲಕ್ಷ್ಯದಿಂದ ಕಾರು, ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ಗಾಯಗಳಾಗಿರುವುದು ಬೇಸರದ ಸಂಗತಿ ಎಂದು ತಿಳಿಸಿದ್ದಾರೆ.


ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಗಂಭೀರ ಅನಾಹುತ ಸಂಭವಿಸುವುದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ ಎಂದು ತಿಳಿಸಿದ್ದಾರೆ_

ಈ ಅಪಘಾತಕ್ಕೆ ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತೇಜಸ್ವಿ ಆರೋಪಿಸಿದ್ದಾರೆ.

ಚಾಲಕನ ಮೇಲೆ ಈಗಾಗಲೇ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ತೇಜಸ್ವಿ ಒತ್ತಾಯಿಸಿದ್ದಾರೆ.

ಈ ಘಟನೆಯಿಂದ ಕಾರುಗಳಿಗೆ ಸಣ್ಣಪುಟ್ಟ ಹಾನಿಯಾಗಿದ್ದು, ವಿದ್ಯುತ್ ಕಂಬಗಳು ಒಡೆದಿವೆ. ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಪೊಲೀಸರು ಮತ್ತು ಸ್ಥಳೀಯರ ಸಹಾಯದಿಂದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಗಾಯಗೊಂಡವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ,
ಆದರೆ ಕೆಲವು ಪ್ರಯಾಣಿಕರಿಗೆ ಮೂಗೇಟು ಬಿದ್ದಿದ್ದು ಮೂಳೆ ಮುರಿತ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚು ಗಾಯಗೊಂಡವರನ್ನು ಗುರುತಿಸಿ ಒಂದು ಲಕ್ಷ ರೂ ಚಿಕಿತ್ಸಾ ವೆಚ್ಚವನ್ನು ನೀಡುವಂತೆ ತೇಜಸ್ವಿ ನಾಗಲಿಂಗ ಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0