ತನ್ವೀರ್ ಸೇಠ್ ರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಾಡಿ :- ತೇಜಸ್ವಿ ನಾಗಲಿಂಗಸ್ವಾಮಿ

ತನ್ವೀರ್ ಸೇಠ್ ರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಾಡಿ :- ತೇಜಸ್ವಿ ನಾಗಲಿಂಗಸ್ವಾಮಿ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಮೈಸೂರು :- ಮೈಸೂರಿನ ನರಸಿಂಹ ರಾಜ ಕ್ಷೇತ್ರದ ಜನಪ್ರಿಯ ಶಾಸಕರಾದ ತನ್ವೀರ್ ಸೇಠ್ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾಡುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ

ತನ್ವೀರ್ ಸೇಠ್ ಅವರು ಹಿರಿಯ ಶಾಸಕರಾಗಿದ್ದಾರೆ ಮತ್ತು ಯಾವುದೇ ಕಳಂಕ ಇಲ್ಲದ ರಾಜಕಾರಣಿ ಎಂದು ಕರೆಯಲ್ಪಡುವ ನಾಯಕ ತನ್ವೀರ್ ಸೇಠ್.ಅವರ ತಂದೆ ಕೂಡ ಪ್ರಭಾವಿ ನಾಯಕರಾಗಿದ್ದರು,

ತನ್ವೀರ್ ಸೇಠ್ ಅವರು ಯಾವುದೇ ಧರ್ಮ ಜಾತಿ ಎನ್ನದೆ ಎಲ್ಲರನ್ನೂ ಸಮಾನರಾಗಿ ಕಾಣುತ್ತಿರುವುದು ಮತ್ತು

ಜನಾನುರಾಗಿ ಯಾಗಿರುವ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅವರನ್ನು ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯಿಸುತ್ತಿದ್ದಾರೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ‌‌ ಶಿವಕುಮಾರ್ ಹೈಕಮಾಂಡ್ ಗೆ ತಿಳಿಸಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ‌ ಆಗ್ರಹಿಸಿದ್ದಾರೆ.