ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಯಾರು ಕೂಡ ವಂಚಿತರಾಗಬಾರದು-ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Jul 7, 2025 - 18:21
 0  5
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಯಾರು ಕೂಡ ವಂಚಿತರಾಗಬಾರದು-ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಭಾಗ್ಯನಗರ: ನಮ್ಮ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ತಲುಪುತ್ತಿದಿಯ ಹಾಗೂ ಕುಡಿಯುವ ನೀರು, ರಸ್ತೆ, ಬೀದಿ ದೀಪ ಸೇರಿದಂತೆ ಮೂಲಭೂತಸೌಲಭ್ಯಗಳನ್ನು ಒದಗಿಸಲು ಒತ್ತು ನೀಡುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ತಿಳಿಸಿದರು.

ತಾಲೂಕಿನ ತಿಮ್ಮoಪಲ್ಲಿ ಗ್ರಾಮ ಪಂಚಾಯಿತಿ  ಕೇಂದ್ರ ಸ್ಥಾನದಲ್ಲಿ ಜುಲೈ 16 ರಂದು ಕಂದಾಯ ಇಲಾಖೆ,ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಯುವ ಜನಸ್ಪಂದನ ಕಾರ್ಯ ಕ್ರಮದ ಅಂಗವಾಗಿ ಶಾಸಕ ಎಸ್.ಎನ್.ಸುಬ್ಬಾ ರೆಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚೆಂಚುರಾಯಣಪಲ್ಲಿ, ಕನoಪಲ್ಲಿ,ಗಂಗಿರೆಡ್ಡಿಪಲ್ಲಿ, ಮದಕವಾರದಲ್ಲಿ, ಜಿ.ಮದ್ದೇಪಲ್ಲಿ, ಗುಟ್ಟದಲ್ಲಿ, ತಟ್ಟನ್ನಗಾರಿಪಲ್ಲಿ,ಮುಲ್ಲಂಗಿ ಚೆಟ್ಟಲ್ಲಪಲ್ಲಿ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಜನರ ಜೊತೆ ಮಾತನಾಡಿದ ಅವರು ಸಾರ್ವಜನಿಕರಿಂದ ಮಾತನಾಡಿದರು. ಅಹವಾಲುಗಳನ್ನು ಸ್ವೀಕರಿಸಿ ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ, ಈಗಾಗಲೇ ತಾಲೂಕಿನ ಗ್ರಾಮೀಣ ಪ್ರದೇಶಗಳ ಬಹುತೇಕ ರಸ್ತೆಗಳ ಅಭಿವೃದ್ಧಿಪಡಿಸಲಾಗಿದೆ.

ಸರ್ಕಾರ ನೀಡಿರುವ ಗ್ಯಾರಂಟಿ ಸೌಲಭ್ಯ ಸೇರಿದಂತೆ ಸರ್ಕಾರದಿಂದ ಜನರಿಗೆ ಸಿಗಬೇಕಾದ ಯಾವುದೇ ಸೌಲಭ್ಯಗಳಿಂದ ವಂಚಿತರಾಗಿದ್ದರೆ ಎಂಬುವುದನ್ನು ನನ್ನ ಗಮನಕ್ಕೆ ತನ್ನಿ, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು...

ಈ ಸಂಧರ್ಭದಲ್ಲಿ ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ,ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಮಚಂದ್ರ,ಗ್ರಾಮೀಣ ಕುಡಿಯುವ ನೀರು ಸರಬರಾಜು ಅಭಿಯನಂತರ ಮಹೇಶ್, ಕಂದಾಯ ನಿರೀಕ್ಷಿಕ ಅನೀಲ್, ಗ್ರಾಮ ಲೆಕ್ಕಧಿಕಾರಿ ಕುಮಾರ್, ಬೆಸ್ಕಾ ಹರೀಶ್,ಎ.ಎಸ್.ಐ ಶಂಕರ್ ರೆಡ್ಡಿ,ಸೇರಿದಂತೆ ಮತ್ತಿತರರು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456