ಪರಿಶಿಷ್ಟ ಹಣ ಪರಿಶಿಷ್ಟರಿಗೆ ಮಾತ್ರ ಸಮರ್ಪಕ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ

Aug 18, 2025 - 17:09
 0  2
ಪರಿಶಿಷ್ಟ ಹಣ ಪರಿಶಿಷ್ಟರಿಗೆ ಮಾತ್ರ ಸಮರ್ಪಕ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ

ಚನ್ನರಾಯಪಟ್ಟಣ: ಪರಿಶಿಷ್ಟ ಹಣ ಪರಿಶಿಷ್ಟರಿಗೆ ಮಾತ್ರ ಸಮರ್ಪಕ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ಹಾಸನ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಆರ್ ಮಂಜುನಾಥ್ ತಿಳಿಸಿದರು.  ಪಟ್ಟಣದ ಪತ್ರಕರ್ತರ ಭವನದಲ್ಲಿ ಮಾತನಾಡಿ ಅವರು ಇದೇ ತಿಂಗಳು 21ನೇ ತಾರೀಕು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ 6,000ಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸಲಿದ್ದಾರೆ, ಅದೇ ರೀತಿ ನಮ್ಮ ಜಿಲ್ಲೆಯಿಂದ 1000 ದಲಿತ ಕಾರ್ಯಕರ್ತರು ಪಾಲ್ಗೊಳ್ಳುವುದಾಗಿ ತಿಳಿಸಿದರು. ನಮ್ಮ ಚನ್ನರಾಯಪಟ್ಟಣ ತಾಲೂಕಿನ ದಲಿತ ಸಂಘಟನೆಯ ಎಲ್ಲಾ ಮುಖಂಡರು ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ಆರ್ ಮಂಜುನಾಥ್, ಮಧು, ರಮೇಶ್, ಲಕ್ಷ್ಮಯ್ಯ, ಕಿಶೋರ್, ರಮೇಶ್, ಬಾಲಚಂದ್ರ, ರುದ್ರೇಶ್ ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456