ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದಲಿತರ ಕೊಂದು ಕೊರತೆ ಸಭೆ

ಬಾಗೇಪಲ್ಲಿ: ದಲಿತ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಭಾನುವಾರ ಪಟ್ಟಣದ ಪೋಲಿಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ದಲಿತ ಕುಂದು ಕೊರತೆಗಳ ಸಭೆ ನಡೆಯಿತು.
ಅಕ್ರಮ ಮಧ್ಯ ಮಾರಾಟ ಮತ್ತು ಜೂಜಾಟವನ್ನು ತಡೆಗಟ್ಟುವುದರ ಜೊತೆಗೆ ಯಾವುದೆ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ಆರಕ್ಷಕ ವೃತ ನಿರೀಕ್ಷಕ ಪ್ರಶಾಂತ್ ವರ್ಣಿ ತಿಳಿಸಿದರು.
ಪಟ್ಟಣದ ಪೋಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ದಲಿತರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರಧೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.
ದಲಿತ ಮುಖಂಡ ಕೋಟಪ್ಪ ಮಾತನಾಡಿ, ಪಟ್ಟಣದ ನಾನಾ ಕಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೆ, ಪಟ್ಟಣ ಸೇರಿ ಹಳ್ಳಿಗಳಲ್ಲಿ ಗಾಂಜಾ ಮಾರಾಟ ಮಾಡುವುದರಿಂದ ವಿದ್ಯಾರ್ಥಿಗಳು ದುಶ್ಚಟಕ್ಕೆ ದಾಸರಾಗುವ ಆತಂಕ ಪಾಲಕರಲ್ಲಿದೆ. ಹಾಗಾಗಿ, ಗಾಂಜಾ ಮಾರಾಟವನ್ನು ತಡೆಯಲು ಕ್ರಮಕೈಗಳ್ಳಬೇಕೆಂದು ಒತ್ತಾಯಿಸಿದರು.
ದಲಿತ ಮುಖಂಡ ಲಕ್ಷ್ಮೀ ನರಸಿಂಹಪ್ಪ ಮಾತನಾಡಿ
ಪಟ್ಟಣದ ಡಿ.ವಿ.ಜಿ. ಮುಖ್ಯ ರಸ್ತೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಅಪರಾಧ, ಕಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಸಿ ಸಿ ಕ್ಯಾಮರಾ ಅಳವಡಿಸಲು ಸಹಕಾರ ನೀಡಿದರೆ ಉತ್ತಮವಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದ್ದರು. ಪಟ್ಟಣದ ಪುರಸಭೆ 25 ಲಕ್ಷ ರೂ ಅನುದಾನ ಸಿದ್ದವಾಗಿದೆ ಎಂದು ಸಭೆಯಲ್ಲಿ ಪ್ರಶಾಂತ್ ವರ್ಣಿ ತಿಳಿಸಿದರು.
ಪಟ್ಟಣದಲ್ಲಿ ಬೆಳ್ಳೆಗ್ಗೆ ಹಾಗೂ ಸಂಜೆ ಶಾಲಾ ಕಾಲೇಜುಗಳು ಬಿಟ್ಟಾಗ ಪೋಲಿ ಹುಡುಗರ ಹೆಣ್ಣು ಮಕ್ಕಳು ಚುಡಾಯಿಸುತ್ತರೆ ಆದ್ದರಿಂದ ಅಂತಹ ಸಮಯದಲ್ಲಿ ಸೂಕ್ತ ಪೋಲಿಸ್ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು..