ಭಕ್ತಿಭಾವ ತುಂಬಿದ ಅನುಕೃಪ ಗಾಯನ
ಬೆಂಗಳೂರು: ತ್ಯಾಗರಾಜನಗರದ ಶ್ರೀ ಅಭಯ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ವಜ್ರಕ್ಷೇತ್ರದಲ್ಲಿ ಜರುಗುತ್ತಿರುವ ಶ್ರೀ ನರಸಿಂಹ ಜಯಂತ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಅನುಕೃಪ ಪುರೋಹಿತ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ಹಾಗೂ ಅನ್ನಮಾಚಾರ್ಯರ ಕೀರ್ತನೆಗಳನ್ನು ತಾರತಮ್ಯೋಕ್ತವಾಗಿ ಮತ್ತು ಸುಶ್ರಾವ್ಯವಾಗಿ ಹಾಡಿದರು. ಇವರ ಗಾಯನಕ್ಕೆ ಕೀಬೋರ್ಡ್ ವಾದನದಲ್ಲಿ ಶ್ರೀ ಟಿ.ಎಸ್. ರಮೇಶ್ ಮತ್ತು ತಬಲಾ ವಾದನದಲ್ಲಿ ಶ್ರೀ ಪ್ರಮಥ್ ವಿಠಲ್ ಸಾಥ್ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ|| ವಾದಿರಾಜಾಚಾರ್ ಮತ್ತು ಸಹ-ಅರ್ಚಕರಾದ ಶ್ರೀ ನರಹರಿ ಆಚಾರ್ ಕಲಾವಿದರಿಗೆ ಸ್ವಾಮಿಯ ಪ್ರಸಾದ ಮತ್ತು ಸರ್ಟಿಫಿಕೇಟ್ ನೀಡಿ ಆಶೀರ್ವದಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
