ರಾಜ್ಯ ಮಟ್ಟದ ಡಿಸಿಎಲ್ ಸ್ಪರ್ಧೆ-ಲಕ್ಕೂರಿನ‌ ತಾನೀಶ್ ಎನ್ ಗೆ ದ್ವೀತಿಯ ಬಹುಮಾನ

Jul 29, 2025 - 15:52
 0  7
ರಾಜ್ಯ ಮಟ್ಟದ ಡಿಸಿಎಲ್ ಸ್ಪರ್ಧೆ-ಲಕ್ಕೂರಿನ‌ ತಾನೀಶ್ ಎನ್ ಗೆ ದ್ವೀತಿಯ ಬಹುಮಾನ
ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿಯ ಆಲಂಬಾಡಿ ಭಾಗದಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಕ್ರೈಸ್ಟ್ ಇಂಟರ್ ನ್ಯಾಷನಲ್ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ, ವಿಶ್ವಮಟ್ಟದಲ್ಲಿ ಈಗಾಗಲೇ ಮಹತ್ತರವಾದ ಸಾಧನೆಯನ್ನು ಮಾಡಿರುವ ಈ ಪುಟ್ಟ ಬಾಲಕ ಗ್ರ್ಯಾಂಡ್ ಮಾಸ್ಟರ್ ತಾನೀಶ್.ಎನ್ ಗೆ ರಾಜ್ಯ ಮಟ್ಟದ ಅಂತರ್ ಶಾಲಾ ಸ್ಪರ್ಧೆಯಲ್ಲಿ ಭರತನಾಟ್ಯ ವಿಭಾಗದಲ್ಲಿ ದ್ವೀತಿಯ ಬಹುಮಾನವನ್ನು ಪಡೆದಿದ್ದಾನೆ.
ಬೆಂಗಳೂರಿನ ಡೈರಿ ಸರ್ಕಲ್ ಸಮೀಪದ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ನಡೆದ ದೀಪಿಕಾ ಚಿಲ್ಡ್ರನ್ಸ್ ಲೀಗ್ (ಡಿ.ಸಿ.ಎಲ್) ಅಂತರ ಶಾಲಾ ಏಕವ್ಯಕ್ತಿ ಶಾಸ್ತ್ರೀಯ ಭರತನಾಟ್ಯ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವೀತಿಯ ಬಹುಮಾನ ಪಡೆಯಲಾಗಿದೆ.
ಜೆ.ಬಿ.ಸಿ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ತಾನೀಶ್.ಎನ್ ಗೆ ದ್ವೀತಿಯ ಬಹುಮಾನವಾಗಿ ಪ್ರಶಸ್ತಿ ಪತ್ರ, ಪದಕವನ್ನು ಡಿ.ಸಿ.ಎಲ್ ನಿರ್ದೇಶಕರಾದ ಫಾದರ್ ಬಾಬು ಕಲತುಪರಂಬಿಲ್, ಕಾರ್ಯದರ್ಶಿ ರೂಬಲ್‌ಜಾರ್ಜ್ ರವರು ನೀಡಿ ಗೌರವಿಸಲಾಯಿತು.
ಡಿ.ಸಿ.ಎಲ್ ನಲ್ಲಿ ತಾನೀಶ್.ಎನ್ ಗೆ ಬಂದಿರುವ ಬಹುಮಾನಕ್ಕಾಗಿ ಕ್ರೈಸ್ಟ್ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ತಂದೆ ಯುವಕವಿ ಲಕ್ಕೂರು ಎಂ.ನಾಗರಾಜ್ ತಾಯಿ ಶ್ವೇತಾಂಜಲಿ ಭರತನಾಟ್ಯ ಶಾಲೆಯ ಸಂಸ್ಥಾಪಕ‌ ಅಧ್ಯಕ್ಷರಾದ ಶ್ರೀಮತಿ ಶ್ವೇತನಾಗರಾಜ್ ಶುಭಹಾರೈಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456