ವನಸಿರಿ ಪೌಂಡೇಷನ್ ನಿಂದ ಸಸಿ ನೆಟ್ಟು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅಮ್ಮನವರ ಹುಟ್ಟುಹಬ್ಬ ಆಚರಣೆ

Jun 30, 2025 - 16:44
 0  8
ವನಸಿರಿ ಪೌಂಡೇಷನ್ ನಿಂದ ಸಸಿ ನೆಟ್ಟು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅಮ್ಮನವರ ಹುಟ್ಟುಹಬ್ಬ ಆಚರಣೆ
ಸಿಂಧನೂರು ತಾಲೂಕಿನ ಬಿ ಆರ್ ಕ್ಯಾಂಪ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕಅಮ್ಮನವರ 114 ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ವನಸಿರಿ ಪೌಂಡೇಷನ್ (ರಿ)ರಾಯಚೂರು ರಾಜ್ಯ ಘಟಕದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
 ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಸಿಗಳು ನೆಡುವ ಮೂಲಕ ಸಾಲುಮರದ ತಿಮ್ಮಕ್ಕ ಅಮ್ಮನವರ ಹುಟ್ಟು ಹಬ್ಬವನ್ನು ವಿನೂತನ ರೀತಿಯಲ್ಲಿ ಆಚರಿಸಿ ಪರಿಸರ ರಕ್ಷಣೆ ಬಗ್ಗೆ ಶಾಲೆಯ ವಿದ್ಯಾರ್ಥಿಗಳ ಮನವರಿಕೆ ಹಾಗೂ ಅವರಿಗೆ ತಿಳುವಳಿಕೆ ನೀಡುವ ಮೂಲಕ ಆಚರಣೆ ಮಾಡಿದರು.ನಂತರ ವಿದ್ಯಾರ್ಥಿಗಳೆಲ್ಲರೂ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರ ಕೈಯಲ್ಲಿ ಹಿಡಿದು ಶುಭ ಕೋರಿದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿ ಮಹೇಶ ರೆಡ್ದಿ ಅವರು ಶಾಲೆಗೆ ತಟ್ಟೆ ಲೋಟ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ವನಸಿರಿ ಪೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಶಾಲೆಯ ಮುಖ್ಯ ಗುರುಗಳು ಅಶೋಕ ಗಾಜಿ, ವನಸಿರಿ ಪೌಂಡೇಷನ್ ಸದಸ್ಯ ರಂಜಾನ್ ಸಾಬ್,ಸುಂದರೇಶ ಶಿಕ್ಷಕರು,ಮಲ್ಲಿಕಾರ್ಜುನ ಶಿಕ್ಷಕರು,ಅತಿಥಿ ಶಿಕ್ಷಕರು ಶ್ರಿಮತಿ ರೇಣುಕಾ,ಶ್ರೀಮತಿ ಅಯ್ಯಮ್ಮ ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456