ವರ್ಷದ ಕನ್ನಡಿಗ ಪ್ರಶಸ್ತಿಗೆ ಕಾಳೇನಹಳ್ಳಿ ಆನಂದ ಕುಮಾರ್ ಭಾಜನರಾದರು
ಚನ್ನರಾಯಪಟ್ಟಣ: ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸುದ್ದಿಕಿರಣ ಟಿವಿ ಮಾಧ್ಯಮದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣ ತಾಲೂಕಿನ ಮಾದರಿ ಕೃಷಿಕ ಹಾಗೂ ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕಾಳೇನಹಳ್ಳಿ ಆನಂದ ಕುಮಾರ್ ಅವರ ಕನ್ನಡ ಪರ ಸೇವೆಯನ್ನು ಗುರುತಿಸಿ ಈ ವರ್ಷದ ಕನ್ನಡಿಗ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಉತ್ತೇನಹಳ್ಳಿ ಚಂದ್ರು, ಅಭಿಷೇಕ್, ಅನಿಲ್ ರಾಜ್, ಚನ್ನಹಳ್ಳಿ ಆನಂದ್ ಸೇರಿದಂತೆ ಇತರರಿಗೆ ವರ್ಷದ ಕನ್ನಡಿಗ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿ ಕಿರಣ ಟಿವಿಯ ಸಂಪಾದಕರಾದ ಮಲ್ಲಿಕಾರ್ಜುನ್ ರೆಡ್ಡಿ ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
