ವಿವಿಧ ಪಕ್ಷ ತೊರೆದು 40 ಕ್ಕೂ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
ಸಂತೆಮರಹಳ್ಳಿ : ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಮುಖಂಡ ಬಿ ಪುಟ್ಟಸ್ವಾಮಿ ಅದ್ಯಕ್ಷತೆಯಲ್ಲಿ ಹಲವಾರು ಯುವ ಕಾರ್ಯಕರ್ತರು ವಿವಿಧ ಪಕ್ಷಗಳನ್ನು ತೊರೆದು ನೂತನವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸುಮಾರು 45 ರಿಂದ 50 ಯುವಕರು ವಿವಿಧ ಪಕ್ಷಗಳನ್ನ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗುವ ಮುಕಾಂತರ ಮುಂಬರುವ ಕೊಳ್ಳೇಗಾಲ ವಿಧಾನ ಸಭೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ತಳ ಮಟ್ಟದಲ್ಲಿ ಬಲ ಪಡಿಸುವ ಉದ್ದೇಶದಿಂದ ಈಗಾಗಲೇ ಹೋಬಳಿ ಮಟ್ಟದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿ ತಾವೇ ಸ್ವತಃ ಸೇರ್ಪಡೆಯಾಗುವುದರಿಂದ ಆನೆ ಬಲ ಬಂತಂತಾಗಿದೆ ಎಂದು ಜೆಡಿಎಸ್ ಮುಖಂಡ ಬಿ ಪುಟ್ಟಸ್ವಾಮಿ ತಿಳಿಸಿದರು.
ನಂತರ ನೂತನವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಯುವ ಮುಖಂಡ ಪ್ರಸಾದ್ ಬಳೆಪೇಟೆ ಮಾತನಾಡಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲ ಪಡಿಸುವ ಉದ್ದೇಶದಿಂದ ವಿವಿಧ ಪಕ್ಷಗಳನ್ನು ತೊರೆದು ನನ್ನ ಜೊತೆ 40 ಕ್ಕೂ ಹೆಚ್ಚು ಯುವಕರು ಜೆಡಿಎಸ್ ಪಕ್ಷದ ಸಿದ್ದಂತವನ್ನು ಒಪ್ಪಿ ಬಿ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಅಭಿಜಿತ್, ಕಾಂತರಾಜ್, ಸಂಜಯ್, ಸುಭಾಷ್, ಶಿವಕುಮಾರ್,ಹರ್ಷ, ಗೌತಮ್, ನಂದನ್ ಸೇರಿದಂತೆ 40 ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮುಖಂಡರಾದ ಬೆಳ್ಳಿಯಪ್ಪ ಮಂಗಳಮ್ಮ ರವೀಶ್ ಸೋಮಣ್ಣ ವೈ ಕೆ ಮೋಳೆ, ಚಂದ್ರ ಶೇಖರ್, ಸಿದ್ದರಾಜ್ ನಾಯ್ಕ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
