ಶಾಲೆಯಲ್ಲಿ ಸಂವಿಧಾನದ ಪಾಠ ಬರಲಿ: ಆಮಿರ್ ಅಶ್ಅರೀ

Aug 17, 2025 - 17:12
 0  13
ಶಾಲೆಯಲ್ಲಿ ಸಂವಿಧಾನದ ಪಾಠ ಬರಲಿ: ಆಮಿರ್ ಅಶ್ಅರೀ
ಯಲಬುರ್ಗಾ: ನಗರದ ಜ್ಞಾನ ಸಾಗರ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯುವ ಸಾಹಿತಿ ಆಮಿರ್ ಅಶ್ಅರೀ ಬನ್ನೂರು ಭಾರತ ದೇಶವೇ ನಮಗೆ ಸಾರ್ವಭೌಮ. ವಿದ್ಯಾವಂತ ಸಮಾಜದಿಂದಲೇ ದೇಶದ ಪ್ರಗತಿ ಮತ್ತು ಹಿತ ಸಾಧ್ಯವಾಗಿದೆ. ದೇಶಪ್ರೇಮವನ್ನು ಮೈಗೂಡಿಸಿಕೊಂಡು ಬದುಕುವ ನಾಗರಿಕ ಸಮಾಜ ನಾವು ಆಗಬೇಕಾಗಿದೆ. ವರ್ತಮಾನದ ಮಕ್ಕಳಿಗೆ ಶಿಕ್ಷಣದ ಜೊತೆಗೆ ದೇಶಪ್ರೇಮ ಮತ್ತು ದೇಶಕ್ಕೆ ಹುತಾತ್ಮರಾದ ಸೇನಾನಿಗಳ ಹಾಗೂ ಸಂವಿಧಾನದ ಬಗೆಗಿನ ಅರಿವನ್ನು ಪ್ರತ್ಯೇಕವಾಗಿ ನೀಡಬೇಕು. ದೈನಂದಿನ ಶಿಕ್ಷಣದ ಜೊತೆಗೆ ಸಂವಿಧಾನದ ಅರಿವನ್ನು ಪ್ರಾಥಮಿಕ ಶಿಕ್ಷಣವಾಗಿ ಮಕ್ಕಳಿಗೆ ನೀಡುವಂತಹ ಯೋಜನೆಯನ್ನು ಸರ್ಕಾರಗಳು ರೂಪಿಸಬೇಕೆಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಅಧ್ಯಕ್ಷ ಸಿ.ಎಚ್ ಪೋಲೀಸ್ ಪಾಟೀಲ್ ಮಾತನಾಡಿ ವಿದ್ಯಾರ್ಥಿಗಳು ಕಲಿಯುವುದಕ್ಕೆ ಹೆಚ್ಚು ಹೊತ್ತು ಕೊಡಬೇಕು. ಶಿಕ್ಷಣ ಪಡೆದುಕೊಳ್ಳುವುದೇ ವಿದ್ಯಾರ್ಥಿಗಳ ನಿಮ್ಮ ಮುಖ್ಯ ಗುರಿಯಾಗಬೇಕಾಗಿದೆ ಎಂದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಕೊಪ್ಪಳ್, ಸಾಮಾಜಿಕ ಮುಂದಾಳು ಮಾಬುಸಾಬ್ ಆರಬಳ್ಳಿನ ಮುಧೋಳ ಮತ್ತು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456