ಹೆಗ್ಗೋಠಾರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ 

Mar 24, 2026 - 16:20
 0  5
ಹೆಗ್ಗೋಠಾರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರ ಆಯ್ಕೆ 

    ಚಾಮರಾಜನಗರ: ತಾಲೋಕಿನ ಹೆಗ್ಗೋಠಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿಯಮಿತ ವತಿಯಿಂದ  ಮುಂಬರುವ 5 ವರ್ಷಗಳಿಗೆ ಆಡಳಿತ ಮಂಡಳಿ ವತಿಯಿಂದ ಹಾಲು ಉತ್ಪಾದಕರ ಆವರಣದಲ್ಲಿ ಚುನಾವಣೆ ನಡೆಸಲಾಯಿತು.


ಕಣದಲ್ಲಿ 25 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದೂ ಇದರಲ್ಲಿ 11 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದು ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವ ಮುಕಾಂತರ ನೂತನ ಹಾಲು ಉತ್ಪಾದಕರ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾಗಿ ಆಯ್ಕೆಯಾದ ದುಂಡುಮಾದಯ್ಯ ಮಾತನಾಡಿ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದರು.


ಈ ನಿಮ್ಮ ಸಹಕಾರದಿಂದ ಅತ್ಯುತ್ತಮವಾಗಿ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾಗಿ ದುಡಿಯುವುದರ ಜೊತೆಗೆ ರೈತರಿಗೆ ಸಕಲ ರೀತಿಯಲ್ಲಿ ಎಲ್ಲಾ ಸೌಲಭ್ಯನೀಡುವುದಾಗಿ ತಿಳಿಸಿದರು.
ರೈತರಿಗೆ ಹೈನುಗಾರಿಕೆಯಲ್ಲಿ ಮುಂದುವರಿಯಲು ಸಹಕಾರ ನೀಡುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ನಿರ್ದೇಶಕರಾದ ನಂಜುಂಡಸ್ವಾಮಿ, ಪುಟ್ಟಮಲ್ಲಪ್ಪ,ಗುರುಮಲ್ಲಪ್ಪ, ಮಲ್ಲೇಶ್, ಎಚ್ ಬಿ ಮಹೇಶ್,ಸುಬ್ಬಮ್ಮ, ಚಿನ್ನಮ್ಮ, ರಮೇಶ್, ಮಹೇಶ್ ಎಂ, ಪಾಪ ನಾಯಕ ಹಾಗೂ ರಿಟರ್ನಿಂಗ್ ಆಫೀಸರ್ ನಾಗೇಶ್ ಇದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456