1. ವಿಜಯಪುರ
ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೊರ್ತಿ ಗ್ರಾಮಕ್ಕೆ ಭೇಟಿ : ಹಾನಿಗೊಳಗಾದ ಬೆಳೆ ವೀಕ್ಷಣೆ
ವಿಜಯಪುರ: ಕೇಂದ್ರ ಬರ ತಂಡ ಆಗಮನ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಜಿಲ್ಲೆಯ ಹೊರ್ತಿ ಹಾಗೂ ಕಪನಿಂಬರಗಿ ಗ್ರಾಮಗಳಿಗೆ ಭೇಟಿ ನೀಡಿ, ಬರದಿಂದ ಹಾನಿಗೊಳಗಾದ ತೋಟಗಾರಿಕೆ ಬೆಳೆಗಳಾದ ಲಿಂಬೆ, ಈರುಳ್ಳಿ, ಮೆಣಸಿನಕಾಯಿ, ಕೃಷಿ ಬೆಳೆಗಳಾದ ಸಜ್ಜೆ, ಮೆಕ್ಕೆಜೋಳ ಬೆಳೆಗಳ ಕುರಿತು ಮಾಹಿತಿ ಪಡೆದುಕೊಂಡರು. ಕೋಳೂರಗಿ ಗ್ರಾಮದ ರೈತರೋರ್ವ ಜಮೀನಿನಲ್ಲಿ ಸೂರ್ಯಕಾಂತಿ ಬೆಳೆ ಕಟಾವು ವೀಕ್ಷಿಸಿದರು.ಈ ಸಂದರ್ಭದಲ್ಲಿ ಕಪನಿಂಬರಗಿ ಕೆರೆ ವೀಕ್ಷಣೆ ಮಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ್ ಭಾವಿದೊಡ್ಡಿ, ಕೃಷಿ ಇಲಾಖೆ ಉಪನಿರ್ದೇಶಕ ಪ್ರಕಾಶ ಚವ್ಹಾಣ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

3. ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ನಮ್ಮ
ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456
0 Comments