ಕಲಾವಿದ ಕೃಷ್ಣ ಭಂಡಾರಿ ನಿಧನ
(ಸುದ್ದಿಕಿರಣ ವರದಿ)
ಕಾರವಾರ: ಹಿರಿಯ ಯಕ್ಷಗಾನ ಕಲಾವಿದ ಗುಣವಂತೆ ಕೃಷ್ಣ ಭಂಡಾರಿ (60) ಶನಿವಾರ ನಿಧನರಾದರು.
ತಮ್ಮ 15ರ ಹರೆಯದಲ್ಲೇ ರಂಗ ಪ್ರವೇಶಿಸಿದ ಅವರು ಇಡಗುಂಜಿ, ಸಾಲಿಗ್ರಾಮ, ಪೆರ್ಡೂರು, ಕಮಲಶಿಲೆ, ಹಾಲಾಡಿ ಮೇಳಗಳಲ್ಲಿ ಕಲಾಸೇವೆಗೈದಿದ್ದರು. ಯಕ್ಷಗಾನದ ಎಲ್ಲಾ ಅಂಗಗಳನ್ನು ಬಲ್ಲ ಪರಿಪೂರ್ಣ ಕಲಾವಿದರಾಗಿದ್ದರು.
ಯಕ್ಷಗಾನ ಗುರುಗಳಾಗಿ ಅನೇಕ ಕಡೆ ತರಗತಿಗಳನ್ನು ನಡೆಸುತ್ತಿದ್ದರು. ಹವ್ಯಾಸಿ ಸಂಘದ ಸದಸ್ಯರಿಗೆ ತರಬೇತಿ ನೀಡಿ ಪ್ರದರ್ಶನ ಏರ್ಪಡಿಸುತ್ತಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಕೃಷ್ಣ ಭಂಡಾರಿ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಳಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ