ಭರತನಾಟ್ಯ
ಗುರುರಾಯರ ಸನ್ನಿಧಿಯಲ್ಲಿ ಕನಕಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ಭರತನಾಟ್ಯ
ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಆಗಸ್ಟ್ 3, ಗುರುವಾರದ ಪ್ರಯುಕ್ತ ಬೆಳಗ್ಗೆ ರಾಯರಿಗೆ ಕನಕಾಭಿಷೇಕ, ಮಹಾಪೂಜೆ, ವಿಶೇಷ ಅಲಂಕಾರ, ಮಹಾಮಂಗಳಾರತಿ ಅನ್ನದಾನ ಸೇವೆ ಕಾರ್ಯಕ್ರಮಗಳು ಜರುಗಿದವು. ಸಂಜೆಯ ಕಾರ್ಯಕ್ರಮಗಳಲ್ಲಿ ಗಜವಾಹನೋತ್ಸವ, ಪಲ್ಲಕ್ಕಿ ಉತ್ಸವ, ರಥೋತ್ಸವ, ಅಷ್ಟಾವಧಾನ, ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರ್ಕ ಕಲಾ ಕುಟೀರದ ವಿದ್ಯಾರ್ಥಿಗಳಿಂದ ಗುರು.ಶ್ರೀಮತಿ ಭಾನುಪ್ರಿಯ ರಾಕೇಶ್ ಅವರ ನಿರ್ದೇಶನದಲ್ಲಿ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ನಡೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

ಸುದ್ದಿ ಕಿರಣ ಟಿವಿ ಬಾಳಿನ ಬೆಳಕು
ಸುದ್ದಿ ಕಿರಣ ಟಿವಿ ಬಾಳಿನ ಬೆಳಕು
ನಮ್ಮ ಈ ವರದಿಯ ಲಿಂಕ್ ನ್ನು ಒಪನ್ ಮಾಡಿ, ಲೈಕ್ ಮಾಡಿ "suddikirana.com SUBSCRIBE ಮಾಡಿ ಬೆಲ್ ಬಟನ್ ಒತ್ತೋದನ್ನು ಮಾತ್ರ ಮರಿಬೇಡಿ ಜೊತೆಗೆ ಇನ್ನಷ್ಟು ಮಂದಿಗೆ ಶೇರ್ ಮಾಡಿ ?? ಸುದ್ದಿ ಮತ್ತು ಜಾಹೀರಾತುಗಳುಗಾಗಿ ಸಂಪರ್ಕಿಸಿ :96866 65456
0 Comments