ಸುದ್ದಿಕಿರಣ ವರದಿ
ಮಂಗಳವಾರ, ಮಾರ್ಚ್ 15
ಉಚ್ಛ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಕುಯಿಲಾಡಿ
ಉಡುಪಿ: ರಾಜ್ಯಾದ್ಯಂತ ವಿವಾದ ಸೃಷ್ಟಿಸಿದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿದ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಸರಕಾರದ ವಸ್ತ್ರ ಸಂಹಿತೆ ಆದೇಶವನ್ನು ಎತ್ತಿಹಿಡಿದ ಉಚ್ಛ ನ್ಯಾಯಾಲಯ, ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆ ಪರವಾಗಿ ನೀಡಿರುವ ತೀರ್ಪು ಸಂವಿಧಾನಕ್ಕೆ ದೊರೆತ ಜಯ ಎಂದು ಕುಯಿಲಾಡಿ ವಿಶ್ಲೇಷಿಸಿದ್ದಾರೆ.