ಬಾಲ ಕಾರ್ಮಿಕರ ರಕ್ಷಣೆ; ಇಲಾಖೆ ಕಾರ್ಯಾಚರಣೆ
ಉಡುಪಿ, ನ. 9 (ಸುದ್ದಿಕಿರಣ ವರದಿ) ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್, ಸ್ಫೂರ್ತಿ ವಿಶ್ವಾಸದ ಮನೆ ಶಂಕರಪುರ, ಮಣಿಪಾಲ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ ಉಡುಪಿ ಸಹಯೋಗದೊಂದಿಗೆ, ಉಡುಪಿ ವ್ಯಾಪ್ತಿಯ ಸರ್ವಿಸ್ ಬಸ್ ಸ್ಟಾಂಡ್, ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ, ಇಂದ್ರಾಳಿ ರೈಲ್ವೆ ಸ್ಟೇಷನ್ ಮತ್ತು ಮಲ್ಪೆ ಬಂದರು ಮುಂತಾದ ಪ್ರದೇಶಗಳಲ್ಲಿ ಮಂಗಳವಾರ ಭಿಕ್ಷಾಟನೆ ಕಾರ್ಯಾಚರಣೆ ನಡೆಸಲಾಯಿತು .
ಕಾರ್ಯಾಚರಣೆಯಲ್ಲಿ ನಾಲ್ವರು ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೋನಾಲ್ಡ್ ಪುಟಾರ್ಡೋ ಎದುರು ಹಾಜರುಪಡಿಸಲಾಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯಕ್, ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಕಪಿಲ, ಸಮಾಜ ಕಾರ್ಯಕರ್ತ ಯೋಗೀಶ್, ಸುರಕ್ಷಾ, ಔಟ್ರಿಚ್ ವರ್ಕರ್ ಸಂದೇಶ್, ಸುನಂದಾ, ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು, ಸಾಮಾಜಿಕ ಕಾರ್ಯಕರ್ತ ತಾರಾನಾಥ್ ಮೇಸ್ತ ಶಿರೂರು, ಮಣಿಪಾಲ ಪೊಲೀಸ್ ಠಾಣಾ ಸಿಬ್ಬಂದಿ, ಮಹಿಳಾ ಪೊಲೀಸ್ ಸಿಬ್ಬಂದಿ ಉಡುಪಿ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಭಾಗಿಯಾಗಿದ್ದರು.