ಸುದ್ದಿಕಿರಣ ವರದಿ
ಗುರುವಾರ, ಜನವರಿ 6, 2022
ಕೃಷ್ಣಮಠಕ್ಕೆ ಮುಳಬಾಗಿಲು ಶ್ರೀ ಭೇಟಿ
ಉಡುಪಿ: ಮುಳಬಾಗಿಲು ಶ್ರೀಪಾದರಾಜ ಮಠದ ಶ್ರೀ ಸುಜಯನಿಧಿತೀರ್ಥ ಶ್ರೀಪಾದರು ಗುರುವಾರ ಇಲ್ಲಿನ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.
ಶ್ರೀಗಳನ್ನು ಮಠೀಯ ಸಂಪ್ರದಾಯದಂತೆ ಬಿರುದಾವಳಿ, ವೇದಘೋಷ, ವಾದ್ಯಗಳೊಂದಿಗೆ ಬರಮಾಡಿಕೊಳ್ಳಲಾಯಿತು.
ಶ್ರೀಕೃಷ್ಣ ಮಠದ ಮಹಾದ್ವಾರದಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮುಳಬಾಗಿಲು ಶ್ರೀಪಾದರನ್ನು ಬರಮಾಡಿಕೊಂಡರು.
ಕನಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಮಾಡಿಸಿ, ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿದರು.
ಪರ್ಯಾಯ ಅದಮಾರು ಶ್ರೀಕೃಷ್ಣ ಮಠದ ವ್ಯವಸ್ಥಾಪಕ ಗೋವಿಂದರಾಜ್ ಇದ್ದರು