ಉಡುಪಿ: ಜಿಲ್ಲೆಯಲ್ಲಿ ಈಚೆಗೆ ಸಂಭವಿಸಿದ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದ ಕೇಂದ್ರ ತಂಡ, ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು.
ಕೇಂದ್ರ ತಂಡದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಸೂಪರಿಂಟೆಂಡೆಂಟ್ ಇಂಜನಿಯರ್ ಸದಾನಂದ ಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಪೊನ್ನುಸ್ವಾಮಿ, ರಾಜ್ಯ ವಿಪತ್ತು ನಿರ್ವಹಣೆ ವಿಭಾಗದ ಆಯುಕ್ತ ಮನೋಜ್ ರಾಜನ್, ರಾಜ್ಯ ವಿಪತ್ತು ನಿರ್ವಹಣೆ ವಿಭಾಗದ ಹಿರಿಯ ವಿಜ್ಞಾನಿ ಡಾ. ಶ್ರೀನಿವಾಸ ರೆಡ್ಡಿ ಇದ್ದರು.
ಉಪ್ಪುಂದ, ಮಡಿಕಲ್, ಬೈಂದೂರು, ಮರವಂತೆ, ಕಾಪು ಲೈಟ್ ಹೌಸ್, ಕೈಪುಂಜಾಲು, ಪಡುಬಿದ್ರೆ ಬೀಚ್ ಮತ್ತು ಬ್ಲೂ ಫ್ಲ್ಯಾಗ್ ಬೀಚ್ ಗೆ ಭೇಟಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಜಿ. ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮಿ, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಕಾಪು ತಹಸೀಲ್ದಾರ್ ಪ್ರತಿಭಾ ಮೊದಲಾದವರಿದ್ದರು