ಅಜೆಕಾರು: ಸದಾ ಸಮಾಜಮುಖಿ ಕೆಲಸದಲ್ಲಿ ಮುಂಚೂಣಿಯಲ್ಲಿರುವ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಆರೋಗ್ಯ, ಶಿಕ್ಷಣ, ಬಡ ಹೆಣ್ಣುಮಕ್ಕಳ ಮದುವೆ, ಬಡವರಿಗೆ ಮನೆ ನಿರ್ಮಾಣದಲ್ಲಿ ನೆರವು…. ಹೀಗೆ ಸಮಾಜದಲ್ಲಿ ನೊಂದವರಿಗೆ ಸಹಾಯ ಹಸ್ತವನ್ನು ನೀಡುತ್ತಿದೆ.
ಕೋವಿಡ್ ನ ಈ ಸಂಕಷ್ಟ ಸಮಯದಲ್ಲೂ ಅಧಿಕ ಪಡಿತರ ಕಿಟ್ ಗಳನ್ನು ಬಡಜನರಿಗೆ ಜಿಲ್ಲೆಯಾದ್ಯಂತ ವಿತರಿಸುತ್ತಿದ್ದು, ಇಲ್ಲಿನ ಒಟ್ಟು 40ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಹಾಗೂ ಇತರ ಬಡವರಿಗೆ ಪಡಿತರ ಕಿಟ್ ವಿತರಿಸಲಾಯಿತು.
ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿಟ್ ವಿತರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ವಿಶ್ವವೇ ಕೊರೊನಾ ವೈರಸ್ ನಿಂದ ತತ್ತರಿಸಿರುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಪ್ರತೀ ಮನೆಗಳಿಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕೊರೊನಾ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರ ಕಾರ್ಯ ಅಭಿನಂದನೀಯ ಎಂದರು.
ಇದೇ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಮುಖ್ಯಸ್ಥ ರಾಘವೇಂದ್ರ ನಾಯಕ್, ಸಂಸ್ಥೆಯ ನಿತ್ಯಾನಂದ ನಾಯಕ್, ಸುಜಿತ್ ನಾಯಕ್, ಆರೋಗ್ಯಾಧಿಕಾರಿ ಅನುಷಾ ಶೆಟ್ಟಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು