ಪ್ರತಿನಿಧಿಗಳ ಸಂಘದಿಂದ ರಕ್ತದಾನ ಶಿಬಿರ
(ಸುದ್ದಿಕಿರಣ ವರದಿ)
ಮಣಿಪಾಲ: ವೈದ್ಯಕೀಯ ಪ್ರತಿನಿಧಿಗಳ ಸಂಘ ಉಡುಪಿ ಜಿಲ್ಲೆ ಮತ್ತು ಕೆ.ಎಂ.ಸಿ ಮಣಿಪಾಲ ರಕ್ತನಿಧಿ ಕೇಂದ್ರ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವ ಪ್ರಯುಕ್ತ ನಡೆಸಲಾದ ರಕ್ತದಾನ ಶಿಬಿರದಲ್ಲಿ 75 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಶನಿವಾರ ಕೆ.ಎಂ.ಸಿ ಲೆಕ್ಚಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಸರ್ಜರಿ ವಿಭಾಗ ಪ್ರಾಧ್ಯಾಪಕ ಡಾ. ಅಣ್ಣಪ್ಪ ಕುಡ್ವ, ರಕ್ತಕ್ಕೆ ಪರ್ಯಾಯ ಮತ್ತೊಂದಿಲ್ಲ. ಒಂದು ಯುನಿಟ್ ರಕ್ತದಿಂದ 3 ಮಂದಿಯ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ವೈದ್ಯಕೀಯ ಪ್ರತಿನಿಧಿಗಳ ಕಾರ್ಯ ಶ್ಲಾಘನೀಯ ಎಂದರು.
ಅತಿಥಿಗಳಾಗಿ ರಕ್ತನಿಧಿ ವಿಭಾಗ ಮುಖ್ಯಸ್ಥೆ ಡಾ. ಶಮೀ ಶಾಸ್ರಿ, ಎಂ.ಎಸ್. ಕಚೇರಿಯ ಡಾ. ಉತ್ತಮ್ ಶರ್ಮ, ವೈದ್ಯಕೀಯ ಪ್ರತಿನಿಧಿ ಸಂಘ ಕಾರ್ಯದರ್ಶಿ ಪ್ರಸನ್ನ ಕಾರಂತ್, ಮಧುಸೂದನ ಹೇರೂರು ಇದ್ದರು.
ಈ ಸಂದರ್ಭದಲ್ಲಿ ಹಿರಿಯ ವೈದ್ಯಕೀಯ ಪ್ರತಿನಿಧಿ ಮಧುಸೂದನ ಹೇರೂರು ಅವರನ್ನು ಗೌರವಿಸಲಾಯಿತು.
ಅನಂತ ಹೊಳ್ಳ ಸಹಕರಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.