ವಾಟರ್ ಚಿಲ್ಲರ್ ಕೊಡುಗೆ
(ಸುದ್ದಿಕಿರಣ ವರದಿ)
ಉಡುಪಿ: ಇಲ್ಲಿನ ಮಿಷನ್ ಕಂಪೌಂಡಿನ ಚಂದು ಮೈದಾನದಲ್ಲಿರುವ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಗೆ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ವತಿಯಿಂದ ಸುಮಾರು 90 ಸಾವಿರ ರೂ. ಮೌಲ್ಯದ ವಾಟರ್ ಚಿಲ್ಲರ್ ನ್ನು ಕೊಡುಗೆಯಾಗಿ ನೀಡಲಾಯಿತು.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ. ಡಿ.ಎ.ಆರ್. ರಾಘವೇಂದ್ರ, ಮಹಿಳಾ ಠಾಣೆ ನಿರೀಕ್ಷಕ ಜಯಂತ್, ಪೊಲೀಸ್ ಸಿಬ್ಬಂದಿ ಹಾಗೂ ಪೊಲೀಸ್ ತರಬೇತಿ ವಿದ್ಯಾರ್ಥಿಗಳು ಇದ್ದರು.