ಮಂಗಳೂರು: ಕಾವೂರಿನ ಅಖಿಲ ಭಾರತ ತುಳು ಒಕ್ಕೂಟ ವತಿಯಿಂದ ನಡೆದ ಸಾಧಕೆರೆಗ್ ತಮ್ಮನ ಬಲ್ಮನ ಕಾರ್ಯಕ್ರಮದಲ್ಲಿ ಉಡುಪಿ ತುಳುಕೂಟ ಒಡಿಪು ಸಂಸ್ಥೆಗೆ ಅತ್ಯುತ್ತಮ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಳೆದ 34 ವರ್ಷದಿಂದ ತುಳುನಾಡಿನಲ್ಲಿ ತುಳು ಭಾಷೆ, ಜಾನಪದ, ಕಲೆ, ಸಂಸ್ಕೃತಿ, ಸಾಹಿತ್ಯ, ನಾಟಕ, ರಂಗಕಲೆಗಳನ್ನು ಉಳಿಸಿ ಬೆಳೆಸಿ, ಪೋಷಿಸುತ್ತಿರುವ ತುಳುಕೂಟದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ. ಸಿ. ಭಂಡಾರಿ ಪ್ರಶಸ್ತಿ ಪ್ರದಾನ ಮಾಡಿದರು. ತುಳುಕೂಟ ಸಂಸ್ಥೆ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಶಸ್ತಿ ಸ್ವೀಕರಿಸಿದರು.
ಉದ್ಯಮಿ ಸದಾನಂದ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾ ಉಪಮಹಾಪ್ರಬಂಧಕ ಆರ್. ಗೋಪಾಲಕೃಷ್ಣ, ಸ್ಥಳೀಯ ಕಾರ್ಪೊರೇಟರ್ ಸುಮಂಗಲ, ತುಳುಕೂಟ ಕುಡ್ಲ ಅಧ್ಯಕ್ಷ ದಾಮೋದರ ನಿಸರ್ಗ, ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಇದ್ದರು.
ತುಳು ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು