ಸುದ್ದಿಕಿರಣ ವರದಿ
ಬುಧವಾರ, ಜೂನ್ 15
ಹಿಂದೂ ಶಾಲಾ ಪಿಟಿಎ ಅಧ್ಯಕ್ಷರ ಪುನರಾಯ್ಕೆ
ಉಡುಪಿ: 162 ವರ್ಷ ಇತಿಹಾಸವುಳ್ಳ ಹಿರಿಯ ಶಿಕ್ಷಣ ಸಂಸ್ಥೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ- ಶಿಕ್ಷಕ ಸಂಘದ ಮಹಾಸಭೆ ಈಚೆಗೆ ನಡೆಯಿತು.
2022- 23ನೇ ಸಾಲಿನ ಅಧ್ಯಕ್ಷರಾಗಿ ಡಾ. ತ್ರಿವೇಣಿ ವೇಣುಗೋಪಾಲ ಪುನರಾಯ್ಕೆಗೊಂಡರು.
ಉಪಾಧ್ಯಕ್ಷರಾಗಿ ರಾಜೀವಿ ಉಮೇಶ್ ಕರ್ಕೇರ, ಕಾರ್ಯದರ್ಶಿಯಾಗಿ ಅಶ್ವಿನಿ ದೇವೇಂದ್ರ, ಜೊತೆ ಕಾರ್ಯದರ್ಶಿ ಜ್ಯೋತಿ ರವೀಂದ್ರ ಶೆಟ್ಟಿ, ಕೋಶಾಧಿಕಾರಿಯಾಗಿ ಮುಖ್ಯೋಪಾಧ್ಯಾಯಿನಿ ಹೇಮಲತಾ ಆಯ್ಕೆಯಾದರು.
ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು