ಸುದ್ದಿಕಿರಣ ವರದಿ
ಶನಿವಾರ, ಜುಲೈ 30
ಶಿವಕುಮಾರ್ ಅಂಬಲಪಾಡಿಗೆ ಅಭಿನಂದನೆ
ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ ಸ್ಟಿಟ್ಯೂಟ್ ಮ್ಯಾನೇಜ್ ಮೆಂಟ್ ಕಮಿಟಿ ಸದಸ್ಯರಾಗಿ ನೇಮಕಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಮಂಡಳಿ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಮತ್ತು ಶ್ರೀಶ ನಾಯಕ್ ಪೆರ್ಣಂಕಿಲ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಮೊದಲಾದವರಿದ್ದರು.