ಸುದ್ದಿಕಿರಣ ವರದಿ
ಗುರುವಾರ, ಜೂನ್ 16
ಜೂ. 21: ಕಾರ್ಕಳ, ಉಡುಪಿಗಳಲ್ಲಿ ಯೋಗ ದಿನಾಚರಣೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ, ಪತಂಜಲಿ ಯೋಗ ಶಿಕ್ಷಣ ಸಮಿತಿ ಉಡುಪಿ, ಜಿಲ್ಲೆಯ ಯೋಗ ಸಂಸ್ಥೆಗಳು, ಸಂಘಸಂಸ್ಥೆಗಳು ಹಾಗೂ ಯೋಗಾಸಕ್ತರ ಸಹಯೋಗದೊಂದಿಗೆ ಜೂನ್ 21ರಂದು ಉಡುಪಿ ಮತ್ತು ಕಾರ್ಕಳಗಳಲ್ಲಿ ಯೋಗ ದಿನಾಚರಣೆ ನಡೆಯಲಿದೆ.
ಉಡುಪಿ ಶ್ರೀಕೃಷ್ಣ ಮಠ ರಾಜಾಂಗಣದಲ್ಲಿ ಬೆಳಿಗ್ಗೆ 6.45ಕ್ಕೆ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುವುದು.
ಮಾನವತೆಗಾಗಿ ಯೋಗ
ಯೋಗವನ್ನು ದಿನನಿತ್ಯದ ಚಟುವಟಿಕೆಯಾಗಿಸಿಕೊಂಡಲ್ಲಿ ಜನರ ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸಿಕೊಳ್ಳಬಹುದಾಗಿದ್ದು, ಈ ಹಿನ್ನೆಲೆಯಲ್ಲಿ ಮಾನವತೆಗಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯ ಶ್ರೀಕೃಷ್ಣ ಮಠ ಹಾಗೂ ಕಾರ್ಕಳ ಗೊಮ್ಮಟ ಬೆಟ್ಟಗಳಲ್ಲಿ ಈ ಬಾರಿಯ ಸಾಲಿನ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಯೋಗಾಸನಗಳ ಪ್ರಾತ್ಯಕ್ಷಿಕೆ ಪ್ರದರ್ಶನ, ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇತ್ಯಾದಿ ಯೋಗದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಜಿಲ್ಲಾ ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆ ತಿಳಿಸಿದೆ.