ಅಂಜನೇಯ ಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿ ಕಳ್ಳರು ಪರಾರಿ

ಅಂಜನೇಯ ಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿ ಕಳ್ಳರು ಪರಾರಿ

ಅಂಜನೇಯ ಸ್ವಾಮಿ ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿ ಕಳ್ಳರು ಪರಾರಿ

ಹಲಗೂರು: ಸಮೀಪದ ಯತ್ತಂಬಾಡಿ ಗ್ರಾಮದ ಪ್ರಮುಖ ವೃತ್ತದಲ್ಲಿರುವ ಅಂಜನೇಯ ಸ್ವಾಮಿ ದೇವಾಲಯದ ಬಾಗಿಲು ಮುರಿದ ಕಳ್ಳರು, ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ದೇವಾಲಯದ ಕೂಗಳತೆ ದೂರದಲ್ಲಿರುವ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕಂಪ್ಯೂಟರ್ ಮಾನಿಟರ್, ಸಿಪಿಯು ಮತ್ತು ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ.  ಸಿಬ್ಬಂದಿ ಕಚೇರಿಯಲ್ಲಿ ಕಳ್ಳತನ ಆಗಿರುವುದನ್ನು ಗಮನಿಸಿದಾಗ ಬೀರುವಿನಲ್ಲಿ ಇಟ್ಟಿದ್ದ ಚೆಕ್ ಬುಕ್ ಮತ್ತು ಪಾಸ್ ಬುಕ್ ಗಳು ಇಲ್ಲದಿರುವುದು ಗಮನಕ್ಕೆ ಬಂದಿದೆ. ವಿಷಯ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಿಬ್ಬಂದಿ ಮತ್ತು ಗ್ರಾಮಸ್ಥರಿಂದ ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ಬೆರಳಚ್ಚು ತಜ್ಞರು ಮತ್ತು ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಕಳ್ಳರನ್ನು ಪತ್ತೆ ಹಚ್ಚುವ ಕಾರ್ಯ ನಡೆಯಿತು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲೋಕೇಶ್ ತಿಳಿಸಿದರು. ಈ ಸಂಬಂಧ  ಹಲಗೂರು ಸಬ್ ಇನ್ಸ್ಪೆಕ್ಟರ್ ಮಹೇಂದ್ರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.