ಅಕ್ಷರ ದಾಸೋಹ  ಬಿಸಿ ಊಟದಲ್ಲಿ ಹುಳು: ಶಿಕ್ಷಕರನ್ನ ತರಾಟೆಗೆ ತಗೆದುಕೊಂಡು ಗ್ರಾಮಸ್ಥರು 

Jun 16, 2025 - 11:17
 0  7
ಅಕ್ಷರ ದಾಸೋಹ  ಬಿಸಿ ಊಟದಲ್ಲಿ ಹುಳು: ಶಿಕ್ಷಕರನ್ನ ತರಾಟೆಗೆ ತಗೆದುಕೊಂಡು ಗ್ರಾಮಸ್ಥರು 

ಮೈಸೂರು:  ನಂಜನಗೂಡು ತಾಲೋಕಿನ ಚಿಕ್ಕ ಹೊಮ್ಮಾಹಾಗೂ ದೊಡ್ಡ ಹೊಮ್ಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಊಟದ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆ ಮುಖ್ಯ ಶಿಕ್ಷಕರನ್ನು ಹಿಗ್ಗಾ ಮೊಗ್ಗಾ ತರಾಟೆಗೆ ತಗೆದುಕೊಂಡ ಪೋಷಕರು ಹಾಗೂ ಗ್ರಾಮದ ಸಾರ್ವಜನಿಕರು.

ಎರಡು ಗ್ರಾಮಕ್ಕೆ  ಒಂದೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿ ಊಟದಲ್ಲಿ  ಹುಳು ಬಿದ್ದಿರುವ ಅಕ್ಕಿಯನ್ನೇ ಅಡುಗೆ ಮಾಡಿ ನೀಡುವುದು ಖಂಡನೀಯ  ಎಂದು ಅಲ್ಲಿನ ಗ್ರಾ ಪಂ ಸದಸ್ಯರು ಹಾಗೂ ಗ್ರಾಮಸ್ಥರು ಆರೋಪ ಮಾಡಿದ್ದಾರೆ 

ಈ ವಿಚಾರದ ಆಡಳಿತ ಶಾಲಾ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಗಮನಕ್ಕೆ ಬಾರದೆ ಹುಳು ಬಿದ್ದಿರುವ ಅಕ್ಕಿಯನ್ನೇ ಅಡುಗೆ ಮಾಡಿ ಮಕ್ಕಳಿಗೆ ನೀಡುವುದು ದುರಂತ ಅಲ್ಲವೇ ಎಂದು ಶಾಲೆ ಆಡಳಿತ ಮಂಡಳಿ ಅಧ್ಯಕ್ಷರು ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಶಾಲೆಯಲ್ಲಿ ಅಕ್ಕಿ  ದಾಸ್ತಾನು ಇದ್ದರೂ,  ನಮಗೆ ಸರ್ಕಾರದಿಂದ  ಅಕ್ಕಿ ದಾಸ್ತಾನು ಬಂದಿಲ್ಲ ಎಂದು ಸುಳ್ಳು ಹೇಳಿ ಪಕ್ಕದ ದಾಸನೂರು ಗ್ರಾಮಕ್ಕೆ ಅಕ್ಕಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

 ಕೂಡಲೇ ಸಂಬಂಧ ಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಕ್ತ ರೀತಿಯ ಕ್ರಮ ಜರುಗಿಸಬೇಕೆಂದು ಎಂದು ಒತ್ತಾಯ ಮಾಡಿದ್ದಾರೆ. 

ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಹಾಗೂ ಪೋಷಕರು ಸೇರಿದಂತೆ ಗ್ರಾ ಪಂ ಸದಸ್ಯರು ಇದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456