ಅಯೋಧ್ಯೆ ಧಾಮ ವಿಶೇಷ ರೈಲಿಗೆ ಬೀಳ್ಕೊಡುಗೆ
ಅಯೋಧ್ಯೆ ಧಾಮ ವಿಶೇಷ ರೈಲಿಗೆ ಬೀಳ್ಕೊಡುಗೆ
ಬೆಂಗಳೂರು: ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಬೆಂಗಳೂರಿನಿಂದ ಹೊರಟ ಬೆಂಗಳೂರು-ಅಯೋಧ್ಯೆ ಧಾಮ ವಿಶೇಷ ರೈಲಿಗೆ ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಿಂದ ಬೀಳ್ಕೊಡಲಾಯಿತು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಅವರು ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ದರ್ಶನ ಅಭಿಯಾನದ ರಾಜ್ಯ ಸಂಚಾಲಕ ಸಿದ್ದರಾಜು, ಅಯೋಧ್ಯೆ ಶ್ರೀರಾಮ ಮಂದಿರ ದರ್ಶನ ಅಭಿಯಾನದ ರಾಜ್ಯ ಸಹ ಸಂಚಾಲಕ ಜಗದೀಶ್ ಹೀರೆಮನಿ, ಅಯೋಧ್ಯೆ ಶ್ರೀರಾಮ ಮಂದಿರ ದರ್ಶನ ಅಭಿಯಾನದ ರಾಜ್ಯ ರೈಲ್ವೇ ಸಂಚಾಲಕ ವಿಜೇಂದ್ರ.ಡಿ.ಟಿ, ಇತರ ಮುಖಂಡರು ಹಾಗೂ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.