ಐವತ್ತು ರೂಪಾಯಿಗಾಗಿ ಆರಂಭಗೊಂಡ ಜಗಳ ಕೊಲೆಯಲ್ಲಿ ಅಂತ್ಯ

ಐವತ್ತು ರೂಪಾಯಿಗಾಗಿ ಆರಂಭಗೊಂಡ ಜಗಳ ಕೊಲೆಯಲ್ಲಿ ಅಂತ್ಯ

ಐವತ್ತು ರೂಪಾಯಿಗಾಗಿ ಆರಂಭಗೊಂಡ ಜಗಳ ಕೊಲೆಯಲ್ಲಿ ಅಂತ್ಯ

ಶ್ರವಣಬೆಳಗೊಳ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಶ್ರವಣಬೆಳಗೊಳ ಹೋಬಳಿಯ ಅರುವನಹಳ್ಳಿ ಗ್ರಾಮದ ಕೆಪಿಐ ಇಟ್ಟಿಗೆ ಕಾರ್ಖಾನೆಯಲ್ಲಿ ಮಂಗಳವಾರ ಘಟನೆ ನಡೆದಿದ್ದು, ಬಾಗಲಕೋಟೆ ಜಿಲ್ಲೆ ಬದಾಮಿ ಪಟ್ಟಣದ ಕಳ್ಳಿಪೇಟೆ ಓಣಿಯ ನಿವಾಸಿ ರಾಮಚಂದ್ರ ಸಂಜೀವಪ್ಪನವರ (42 ವರ್ಷ) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಎರಡು ವಾರಗಳ ಹಿಂದೆ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ ಒಂದೇ ಗ್ರಾಮದ ರುದ್ರಯ್ಯ ಚನ್ನಯ್ಯ ಕೊಂಗವಾಡ ಹಾಗೂ ರಾಮಚಂದ್ರ ಸಂಜಿವಪ್ಪನವರ ಇಬ್ಬರು ಸ್ನೇಹಿತರಾಗಿದ್ದರು. ಮಂಗಳವಾರ ಮದ್ಯಾಹ್ನ  ಮದ್ಯದ ಅಮಲಿನಲ್ಲಿ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ರುದ್ರಯ್ಯ ಯಾವುದೋ ಆಯುಧದಿಂದ ಹೊಡೆದಿದ್ದರಿಂದ ರಾಮಚಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತಾ, ಸಿಪಿಐ ಸಂತೋಷ್, ಪಿಎಸೈ ಶಿವಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದು, ಶ್ರವಣಬೆಳಗೊಳ ಠಾಣೆಯಲ್ಲಿ ಕೊಲೆ ಮತ್ತು ಅಟ್ರಾಸಿಟಿ  ಪ್ರಕರಣ ದಾಖಲಾಗಿದೆ. ಬುಧವಾರ  ಆರೋಪಿಯನ್ನು ಬಂಧಿಸಲಾಗಿದೆ.