ಕು|| ಪ್ರಿಯಾಂಕಾ ಶ್ರೀನಿವಾಸ್ "ಭರತನಾಟ್ಯ ರಂಗಪ್ರವೇಶ"

Sep 26, 2025 - 17:37
 0  4
ಕು|| ಪ್ರಿಯಾಂಕಾ ಶ್ರೀನಿವಾಸ್ "ಭರತನಾಟ್ಯ ರಂಗಪ್ರವೇಶ"

ಬೆಂಗಳೂರು: ನಗರದ ಪ್ರತಿಷ್ಠಿತ ನೃತ್ಯ ಸಂಸ್ಥೆಯಾದ ನೃತ್ಯ ದಿಶಾ ಟ್ರಸ್ಟಿನ ಸಂಸ್ಥಾಪಕರೂ ಗುರುಗಳೂ ಆದ  'ಕಲಾಭೂಷಿಣಿ' ಡಾ|| ದರ್ಶಿನಿ ಮಂಜುನಾಥ್ ರವರ ಶಿಷ್ಯೆ ಕು||.ಪ್ರಿಯಾಂಕಾ ಶ್ರೀನಿವಾಸ್ ಅವರ ರಂಗಪ್ರವೇಶ ಸೆಪ್ಟೆಂಬರ್ 28, ಭಾನುವಾರ ಸಂಜೆ  6-00ಕ್ಕೆ
ನಗರದ ಜೆ. ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ 
ನೆರವೇರಲಿದೆ.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಬಿ. ಎಚ್. ನಿಶ್ಚಲ್ (ಜಂಟಿ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಇಲಾಖೆ), ಶ್ರೀ ನಂಜುಂಡರಾವ್ (ಖ್ಯಾತ ವಿಮರ್ಶಕರು ಮತ್ತು ಅಂಕಣಕಾರರು), ಶ್ರೀ ಶ್ರೀನಿವಾಸಮೂರ್ತಿ (ಚಲನಚಿತ್ರ ನಿರ್ಮಾಪಕರು ಮತ್ತು ಸಾಮಾಜಿಕ ಕಾರ್ಯಕರ್ತರು), ಶ್ರೀ ಗಣೇಶ ಆರ್, (ಅರ್ಚಕರು), ಶ್ರೀ ಶಿವಕುಮಾರ್, (ಮಾಜಿ ಸದಸ್ಯರು ಮತ್ತು ಸಾಮಾಜಿಕ ಕಾರ್ಯಕರ್ತರು) ಆಗಮಿಸಲಿದ್ದಾರೆ.

ಇದು ನೃತ್ಯ ದಿಶಾ ಟ್ರಸ್ಟ್ ನ 17ನೇ "ರಂಗಪ್ರವೇಶ" ಆಗಿದ್ದು,
ಗುರು. ಡಾ|| ದರ್ಶಿನಿ ಮಂಜುನಾಥ್ ಅವರ ಸಂಯೋಜನೆಗೆ ಕು|| ಪ್ರಿಯಾಂಕಾ ಶ್ರೀನಿವಾಸ್ ಅತ್ಯಂತ ಆಸಕ್ತಿಯಿಂದ, ಶ್ರದ್ಧಾಭಕ್ತಿಯೊಂದಿಗೆ ಸಜ್ಜಾಗಿದ್ದಾರೆ. 


ವಾದ್ಯಮೇಳದಲ್ಲಿ : ನಟ್ಟುವಾಂಗ-ಗುರು ಡಾ|| ದರ್ಶಿನಿ ಮಂಜುನಾಥ್, ಗಾಯನ-ವಿದುಷಿ ಶ್ರೀಮತಿ ಭಾರತಿ ವೇಣುಗೋಪಾಲ್, ಮೃದಂಗಂ : ವಿದ್ವಾನ್ ಶ್ರೀ ಎಸ್.ವಿ. ಗಿರಿಧರ್, ಪಿಟೀಲು : ವಿದ್ವಾನ್ ಶ್ರೀ ಸಿ. ಮಧುಸೂದನ್, ಕೊಳಲು : ವಿದ್ವಾನ್ ಶ್ರೀ ಎಂ.ಎಸ್. ಪ್ರಮುಖ್, 
ರಿದಂ ಪ್ಯಾಡ್ : ವಿದ್ವಾನ್ ಶ್ರೀ ಕಾರ್ತೀಕ್ ವೈಧತ್ರಿ, ವೀಣಾ : 
ಮಾ|| ಅಚ್ಯುತ್ ಜಗದೀಶ್
ಕಲಾರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಆಗಮಿಸಿ, ಯುವ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕೆಂದು ಸಂಸ್ಥೆಯ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456