ಕೆಜಿಎಫ್ ನಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ
ಕೆಜಿಎಫ್ : ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ನಾಡ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಡಿವಾಳ ಮಾಚಿದೇವರ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು.
ನಂತರ ನಗರಸಭೆ ಆವರಣದಲ್ಲಿ ಮಡಿವಾಳ ಮಾಚಿದೇವರ ರವರ ಭಾವಚಿತ್ರ ಇಟ್ಟು ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಮುಖಂಡರು ರವಿ ಮಾತನಾಡಿ ಮಾಚಿದೇವರು 12ನೇ ಶತಮಾನದಲ್ಲಿ ಬಸವಣ್ಣನವರ ಸಾಮಾಜಿಕ ಚಳುವಳಿಯ ಅಗ್ರನಾಯಕನಾಗಿದ್ದರು. ಅವರ ಕಾಯಕ ನಿಷ್ಠೆ ನ್ಯಾಯ ಪ್ರಾಮಾಣಿಕತೆ ನಿರಹಂಕಾರದಂತಹ ಮೌಲ್ಯಗಳು ಇಂದಿಗೂ ಪ್ರಸ್ತುತ. ಅವರು ಯಾವುದೇ ಒಂದು ಜಾತಿಗೆ ಸೀಮಿತ ಇಲ್ಲದೆ. ಅಸ್ಪೃಶ್ಯತೆ ಬಗ್ಗೆ ಜನರಲ್ಲಿ ಸಾರ್ವಜನಿಕರ ಜೀವನದಲ್ಲಿ ಅರಿವು ಮೂಡಿಸಿದ್ದಾರೆ. ಅಂತಹ ಶಿವಚರಣರನ್ನು ನಾವು ಎಂದಿಗೂ ಮರೆಯಬಾರದು ಎಂದು ತಿಳಿಸಿದರು.
ಪ್ರಧಾನ ಕಾರ್ಯದರ್ಶಿಗಳು ಭೀಮ ನಾಯಕ್. ಕಾರ್ಯದರ್ಶಿ .ರಾಮು. ಸತ್ಯನಾರಾಯಣ. ಖಜಂಚಿ. ಚಂದ್ರಪ್ಪ. ಗೌರವಾಧ್ಯಕ್ಷರು. ನಾಗಣ್ಣ. ಮುನಿಯಪ್ಪ. ಇತರ ಮುಖಂಡರು ಭಾಗವಹಿಸಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
