ಕೆಸರು ಗದ್ದೆಯಂತಾದ ಕಿಕ್ಕೇರಿ ಅಮಾನಿ ಕೆರೆ ಏರಿ ದುರಸ್ತಿ ಪಡಿಸಿಸುವಂತೆ  ಸಾರ್ವಜನಿಕರಿಂದ ಹಿಡಿ ಶಾಪ

Sep 18, 2025 - 16:53
 0  4
ಕೆಸರು ಗದ್ದೆಯಂತಾದ ಕಿಕ್ಕೇರಿ ಅಮಾನಿ ಕೆರೆ ಏರಿ ದುರಸ್ತಿ ಪಡಿಸಿಸುವಂತೆ  ಸಾರ್ವಜನಿಕರಿಂದ ಹಿಡಿ ಶಾಪ

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಇಂದ ಸೊಳ್ಳೇಪುರ, ಕಳ್ಳನಕೆರೆ, ಕುಂದೂರು, ಗ್ರಾಮಗಳಿಗೆ ಸಂಪರ್ಕ ಹೊಂದಿರುವ ಕಿಕ್ಕೇರಿ ಅಮಾನಿಕೆರೆ ಏರಿ  ಮೇಲೆ ದಿನ ನಿತ್ಯ ಶಾಲ ಮತ್ತು ಕಾಲೇಜು ಮಕ್ಕಳು, ಶಾಲಾ ವಾಹನಗಳು, ಹಾಲಿನ ವಾಹನ ಸೇರಿದಂತೆ ಬೈಕ್ ಸಾವಾರರು ಇದೇ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದಾರೆ ಆದರೆ  ಅಮಾನಿ ಕೆರೆ ಏರಿಯ ತುಂಬಾ ಹೊಂಡಗಳು ಬಿದ್ದಿದೆ ಜೊತೆಗೆ ಏರಿಯ ಬದಿಯಲ್ಲಿ ಬೆಳೆದು ನಿಂತಿರುವ ಜಂಗಲ್ ಇಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ

ಕಳೆದ ಒಂದರೆಡು ತಿಂಗಳ ಹಿಂದೆ ಹೇಮಾವತಿ ಇಲಾಖೆ ಇಂದ ಜಂಗಲ್ ಕ್ಲೀನ್ ಮಾಡುವುದಾಗಿ  ಕಿಕ್ಕೇರಿ ಕೆರೆ ಕೋಡಿ ಸಮೀಪ ಮಾತ್ರ  ನೆಪಕ್ಕೆ 20 ಮೀಟರ್ ಅಷ್ಟು ಜಂಗಲ್ ಕ್ಲೀನ್ ಮಾಡಿ ಸಂಪೂರ್ಣವಾಗಿ ಜಂಗಲ್ ಕ್ಲೀನ್ ಮಾಡಿದ್ದೇವೆ ಎಂದು ಹೇಮಾವತಿ ಇಲಾಖೆಯ ಅಧಿಕಾರಿಗಳು ಶಾಮೀಲ ಆಗಿ ಬಿಲ್‌ ಪಡೆದುಕೊಂಡಿದ್ದಾರೆ ಎಂದು ಸೊಳ್ಳೇಪುರ ಗ್ರಾಮಸ್ಥರು ಆರೋಪಿಸಿದ್ರು



 ದೊಡ್ಡ ಅಮಾನಿಕೆರೆ ಮಳೆ ಬಂದ್ರೆ ಸಾಕು ಕೆರೆ ಏರಿ ಕೆಸರಿನ ಗದ್ದೆಯಾಗಿ ಬದಲಾಗುತ್ತದೆ.  1.5 ಕಿಲೋಮೀಟರ್ ಇರವರು ಕೆರೆ ಏರಿಯ ಎರಡು ಬದಿ ತಡೆಗೋಡೆ ನಿರ್ಮಾಣ‌ವಾಗಿಲ್ಲ. ಕೆಸರಿನ ರಸ್ತೆಯಲ್ಲಿ ಸರ್ಕಸ್ ಮಾಡಿಕೊಂಡು ವಾಹನ ಚಾಲನೆ ಮಾಡಬೇಕಾದ ಸ್ಥಿತಿ ವಾಹನ ಸವಾರರಿಗೆ ಎದುರಾಗಿದೆ. ಒಂದು ವೇಳೆ ಅಯ ತಪ್ಪಿ ಬಿದ್ದರೆ ಪ್ರಾಣಕ್ಕೆ ಕುತ್ತು. ಮಳೆ ಬಂದರೆ ಕೆರೆ ಏರಿಯ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ. ಈ ಏರಿ ಮೇಲೆ ಹಲವು ಶಾಲಾ ವಾಹನಗಳು ಸಂಚರಿಸುತ್ತವೆ. ಹಾಗಾಗಿ ಅನಾಹುತ ನಡೆಯುವ ಮುನ್ನ ಜನಪ್ರತಿನಿಧಿಗಳು, ಮತ್ತು ಸಂಬಂದ್ದ ಪಟ್ಟ ಹೇಮಾವತಿ‌ ಇಲಾಖೆ ಕೂಡಲೇ ಕೆರೆ ಏರಿಯನ್ನು ದುರಸ್ತಿ ಪಡಿಸಿ ರಸ್ತೆಗೆ ಡಾಂಬರೀಕರಣ ಮಾಡಬೇಕು ಎನ್ನುವುದು ಸ್ಥಳೀಯ ಸೊಳ್ಳೇಪುರ ಗ್ರಾಮಸ್ಥರು  ಒತ್ತಾಯಿಸಿದ್ದಾರೆ....

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456