ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಜಿಲ್ಲಾ 3ನೇ ಡಿಜೆ ನ್ಯಾಯಾಲಯ

May 13, 2025 - 10:27
 0  15
ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಜಿಲ್ಲಾ 3ನೇ ಡಿಜೆ ನ್ಯಾಯಾಲಯ

ಬಾಗೇಪಲ್ಲಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದು 25 ಸಾವಿರ ರೂಪಾಯಿಗಳ ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ತಾಲ್ಲೂಕಿನ ಮಾಮಿಡಿಕಾಯಿಲಪಲ್ಲಿ ಗ್ರಾಮದ ನರಸಮ್ಮ ಎಂಬ ಮಹಿಳೆಯನ್ನು ಕ್ಷುಲ್ಲಕ ಕಾರಣಕ್ಕಾಗಿ ನಾಗರಾಜಪ್ಪ ಎಂಬಾತ ಒನಕೆಯಿಂದ ತಲೆಗೆ ಹೊಡೆದ ಕಾರಣ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಳು. ಆರೋಪಿಯನ್ನು ಬಾಗೇಪಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಶಾಂತ್ ವರ್ಣಿ ಕೊಲೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ನಾಗರಾಜಪ್ಪ ಕೊಲೆ ಮಾಡಿರುವುದನ್ನು ಸಾಕ್ಷಿಗಳ ಸಮೇತ ಸಾಬೀತುಪಡಿಸಿದ್ದರಿಂದ ಚಿಕ್ಕಬಳ್ಳಾಪುರದ 3 ನೇ ಡಿಜೆ ನ್ಯಾಯಾಲಯವು ವಿಚಾರಣೆನ್ನು ನಡೆಸಿ ಈ ಪ್ರಕರಣದ ಆರೋಪಿತನಾದ ನಾಗರಾಜಪ್ಪ ಈತನ ಮೇಲೆ ಆರೋಪಗಳು ಸಾಭೀತಾಗಿರುವುದರಿಂದ ಈತನನ್ನು ಆರೋಪಿ ಎಂದು ಪರಿಗಣಿಸಿ ಈತನಿಗೆ ಜೀವಾವಧಿ ಶಿಕ್ಷೆ ಮತ್ತು 25000/- ರೂ ದಂಡವನ್ನು ವಿಧಿಸಿ ತೀರ್ಪನ್ನು ಪಕಟಿಸಿರುತ್ತಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456