ಗ್ರಾಮದ ಬಸವಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ14 ರಂದು ಶಿವಯೋಗಿ 

Jan 14, 2026 - 18:03
 0  12
ಗ್ರಾಮದ ಬಸವಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ14 ರಂದು ಶಿವಯೋಗಿ 

   ಢವಳಗಿ: ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು. ಸಿದ್ದರಾಮೇಶ್ವರರ ಬಗ್ಗೆ ಶಾಲೆಯ ಮುಖ್ಯ ಗುರುಗಳಾದ ರಮೇಶ ಮೂಲಿಮನಿ ಅವರು ಮಾತನಾಡಿ ಶಿವಯೋಗಿ ಸಿದ್ಧರಾಮೇಶ್ವರರ ವಚನಗಳು ೧೨ನೇ ಶತಮಾನದ ಶರಣ ಸಾಹಿತ್ಯದ ಪ್ರಮುಖ ಭಾಗವಾಗಿದ್ದು, 'ಕಪಿಲಸಿದ್ಧ ಮಲ್ಲಿಕಾರ್ಜುನ' ಅಂಕಿತದಲ್ಲಿ ರಚಿಸಿದ್ದಾರೆ; ಅವು ಧರ್ಮತತ್ವ, ಸಾಮಾಜಿಕ ಕಾಳಜಿ, ವೈಯಕ್ತಿಕ ಜೀವನದ ಅನುಭವಗಳ ಬೋಧನೆಯನ್ನು ಒಳಗೊಂಡಿದೆ.

ಸಮಾಜದಲ್ಲಿ ಸಮಾನತೆ, ಸ್ತ್ರೀಶಕ್ತಿ, ತತ್ವದಂತಹ ಆಳವಾದ ವಿಚಾರಗಳನ್ನು 'ಅಂಗಕ್ಕೆ ಭೋಗವ ಕೊಟ್ಟವರ ನೋಡಿದೆನಲ್ಲದೆ, ಲಿಂಗಕ್ಕೆ ಕೊಟ್ಟವರ ನೋಡಲಿಲ್ಲ' ಇಂತಹ ವಚನಗಳ ಮೂಲಕ ಸಮಾಜದಲ್ಲಿರುವ ಲೋಪದೋಷಗಳನ್ನು ಸರಿಪಡಿಸುವಂತಹ ಕೆಲಸಗಳನ್ನು ಮಾಡಿದ ಶಿವಶರಣದಲ್ಲಿ ಇವರು ಕೂಡ ಒಬ್ಬರು. 

ಇಂತಹ ಶಿವಶರಣರ ಆದರ್ಶಗಳನ್ನ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಮಕ್ಕಳಿಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ರಮೇಶ ಮೂಲಿಮನಿ. ಸಹ ಶಿಕ್ಷಕರುಗಳಾದ ಜೆ ಎಸ್ ಪಾಟೀಲ್, ಬಿ ಎಸ್ ಪಾಟೀಲ್,  ಹರಿನಾಥ್ ಎನ್, ಎಸ್ ಎಸ್ ಅವಟಿ ಹಾಗೂ ಅತಿಥಿ ಶಿಕ್ಷಕರುಗಳಾದ ಪರಶುರಾಮ ಮೂಲಿಮನಿ, ವಿಜಯಲಕ್ಷ್ಮಿ ಕಟ್ಟಿಮನಿ ಹಾಗೂ ಶಾಲೆಯ ಮುದ್ದು ವಿದ್ಯಾರ್ಥಿಗಳು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456