ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ-ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ಭಾಗ್ಯನಗರ: ಗ್ರಾಮೀಣ ಭಾಗದ ಮೂಲಸೌಕರ್ಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಮಾರು 1.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆ ನಿರ್ಮಾಣವಾಗುತ್ತಿದೆ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದರೆ ಮಾತ್ರ ನಮ್ಮ ದೇಶ ಅಭಿವೃದ್ಧಿ ಆಗುತ್ತದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.
ತಾಲೂಕಿನ ಬಹುದಿನಗಳ ಬೇಡಿಕೆಯಾಗಿದ್ದ ಬಾಗೇಪಲ್ಲಿ–ಚೇಳೂರು ಮುಖ್ಯ ರಸ್ತೆಯಿಂದ ನಲ್ಲಸಾನಂಪಲ್ಲಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಂಗಳವಾರ ಕೊತ್ತಕೋಟವಾಂಡ್ಲಪಲ್ಲಿ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು
ದಶಕಗಳಿಂದಲೂ ದುರಸ್ತಿಯಿಲ್ಲದೆ ಕುಂಟಿತವಾಗಿದ್ದ ಈ ರಸ್ತೆಯಿಂದಾಗಿ ಈ ಭಾಗದ ಸಾರ್ವಜನಿಕರು ಹಾಗೂ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಈ ರಸ್ತೆ ಅಭಿವೃದ್ಧಿಗೊಳ್ಳುವುದರಿಂದ ಮೂಗಿರೆಡ್ಡಿಪಲ್ಲಿ, ರಾಜುವಾಂಡ್ಲಪಲ್ಲಿ,ಕೊತ್ತಕೋಟವಾಂಡ್ಲಪಲ್ಲಿ,ನಲ್ಲಸಾನಂಪಲ್ಲಿ ಗ್ರಾಮಸ್ಥರಿಗೆ ಸಂಚಾರ ಅನುವು ಆಗಲಿದೆ ಹಾಗೂ ಗ್ರಾಮೀಣ ಭಾಗದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸುಗಮ ಸಂಚಾರ ವ್ಯವಸ್ಥೆ ಅತ್ಯಗತ್ಯ. ಈ ಕಾಮಗಾರಿಯು ತಕ್ಷಣವೇ ಆರಂಭವಾಗಲಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲಿದೆ. ಕಾಮಗಾರಿಯಲ್ಲಿ ಯಾವುದೇ ಹಂತದಲ್ಲೂ ರಾಜಿ ಮಾಡಿಕೊಳ್ಳದೆ ಉನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ತಹಸೀಲ್ದಾರ್ ಶ್ವೇತ. ಬಿ.ಕೆ. ಇಒ ರಮೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಹಾಯಕ ನಿರ್ದೇಶಕ ಮಧು,ಲೋಕೋಪಯೋಗಿ ಇಲಾಖೆ ಲೋಕೇಶ್,ಕಾಂಗ್ರೆಸ್ ಮುಖಂಡರಾದ ಸಹದೇವರೆಡ್ಡಿ,ಜಾಲರಿ,ಸುರೇಂದ್ರ,ಪ್ರಭು,ಭೀಮ ನಾಯಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
