ಘಾಳಪೂಜಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ-ಒಬ್ಬನ ಸ್ಥಿತಿ ಗಂಭೀರ.

ಘಾಳಪೂಜಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ-ಒಬ್ಬನ ಸ್ಥಿತಿ ಗಂಭೀರ.

ಘಾಳಪೂಜಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ-ಒಬ್ಬನ ಸ್ಥಿತಿ ಗಂಭೀರ.

ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಝಳ ತಾಕಿದ್ದು ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ. ಘಟನೆ ನಡೆದ ಕೊಠಡಿಯಲ್ಲಿ 16 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ ಈ ಅವಘಡ ಸಂಭವಿಸಿದೆ. ವಾರ್ಡನ್ ಮತ್ತು 10 ನೇ ತರಗತಿ ವಿದ್ಯಾರ್ಥಿಗಳು ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಶಾಲೆಗೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಭೇಟಿ ನೀಡಿ ಘಟನೆಯ ಮಾಹಿತಿ ಸಂಗ್ರಹಿಸಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಶಾಲೆ ಉದ್ಘಾಟನೆಗೊಂಡ ಆರು ತಿಂಗಳಲ್ಲಿಯೇ ಇದು ಎರಡನೇ ಘಟನೆ ಎನ್ನಲಾಗಿದೆ. ಅಗ್ನಿ ಅವಘಡ ಸಂಭವಿಸಿದ್ದರೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸದೆ ಮುಚ್ಚಿ ಹಾಕುವ ಪ್ರಯತ್ನಗಳು ನಡೆದಿದ್ದವು ಎಂದು ಮೂಲಗಳು ತಿಳಿಸಲ್ಲಿಸುವುದಾ ಮಾಹಿತಿ ಲಭ್ಯವಾದರೂ ವಸತಿ ಶಾಲೆ ನಮ್ಮ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಥಳೀಯ ಬಿಇಓ ಬಿ.ಎಸ್.ಸಾವಳಗಿ ಶಾಲೆಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಘಾಳಪೂಜಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಘಟನೆಯ ನಂತರ ಮಂಗಳವಾರ ಸಂಜೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ನಿರ್ಲಕ್ಷ್ಯ, ಬೇಜವಾಬ್ದಾರಿ ತೋರಿರುವ ಪ್ರಿನ್ಸಿಪಾಲ್, ವಾರ್ಡನಗೆ ನೋಟಿಸ್ ಕೊಡುವುದಾಗಿ, ಎರಡು ದಿನಗಳಲ್ಲಿ ಕ್ರೈಸನ ತಂಡ ಶಾಲೆಗೆ ಭೇಟಿ ನೀಡಿ ಹೆಚ್ಚಿನ ವರದಿ ಸಂಗ್ರಹಿಸಲಿರುವುದಾಗಿ ತಿಳಿಸಿದರು. ಹೆಸ್ಕಾಂ ಮತ್ತು ಕಟ್ಟಡದ ಇಂಜಿನೀಯರುಗಳನ್ನು ಕರೆಸಿ ಕೊಠಡಿ ಪರಿಶೀಲಿಸಿದ್ದು ಘಟನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಕಿಡಿಗೇಡಿ ವಿದ್ಯಾರ್ಥಿ ಕೃತ್ಯ ಅನ್ನೋದು ಸ್ಪಷ್ಟವಾಗಿಲ್ಲ. ಮತ್ತೇ ಎರಡು ಮೂರು ದಿನ ಬಿಟ್ಟು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ವೈಯುಕ್ತಿಕವಾಗಿ ಮಾತನಾಡಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ಮಾಹಿತಿ ತಿಳಿಸಿದರು.