ಚಿಟಗುಪ್ಪ ಪಟ್ಟಣದ ಮೂರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ವಿವಿಧ ಸ್ಪರ್ಧೆಗಳು
ಚಿಟಗುಪ್ಪಾ ತಾಲ್ಲೂಕಿನಲ್ಲಿ ದಿ-೨೧-೨-೨೦೨೬ ರಂದು ನಡೆಯಲ್ಲಿರುವ ೩ ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತವಾಗಿ ಇಂದು ಸರಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳು ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ, ನಿಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಭಾಷಣ ಸ್ಪರ್ಧೆಯಲ್ಲಿ ಕನ್ನಡ ಭಾಷೆಯ ಮಹತ್ವ, ಸಾಹಿತ್ಯದ ಶ್ರೀಮಂತಿಕೆ, ಸಂಸ್ಕೃತಿ ಮತ್ತು ಪರಂಪರೆಯ ಕುರಿತು ವಿದ್ಯಾರ್ಥಿಗಳು ಮನೋಜ್ಞವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ನಿಬಂಧ ಸ್ಪರ್ಧೆಯಲ್ಲಿ ಕನ್ನಡ ನಾಡಿನ ಇತಿಹಾಸ, ಕವಿ-ಸಾಹಿತ್ಯಗಾರರ ಕೊಡುಗೆ ಹಾಗೂ ಕನ್ನಡ ಭಾಷೆಯ ಬೆಳವಣಿಗೆ ಕುರಿತು ವಿದ್ಯಾರ್ಥಿಗಳು ಸುಂದರವಾಗಿ ಲೇಖನ ರಚಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ ಹಬ್ಬ-ಹರಿದಿನಗಳು, ಸಾಹಿತ್ಯ ಸಮ್ಮೇಳನದ ಸಾಂದರ್ಭಿಕ ವಿಷಯಗಳನ್ನು ಆಧರಿಸಿ ಆಕರ್ಷಕ ಚಿತ್ರಗಳನ್ನು ಬಿಡಿಸಿದರು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಸವರಾಜ್ ಮೈತ್ರೆಮುಖ್ಯ ಗುರುಗಳು ಉದ್ಘಾಟಿಸಿದರು ಈ ಕಾರ್ಯಕ್ರಮದ ಸಂಯೋಜಕರಾಗಿ ಸಂಜೀವನ ಬೋಸ್ಲೆ ಗುಂಡಪ್ಪಾ ಕೋರಿ ಸಂತೋಷ ದೈಹಿಕ ಶಿಕ್ಷಕರಾರ ಕ್ರಿಸ್ಟಟಿ ಹಸನ ರವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಚಿತ್ರಕಲಾ ಶಿಕ್ಷಕರು ಮಾತನಾಡಿ ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಮೇಲೆ ಪ್ರೀತಿ, ಗೌರವ ಮತ್ತು ಅಭಿಮಾನವನ್ನು ಬೆಳೆಸುವುದು ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಅವರಲ್ಲಿರುವ ಸೃಜನಾತ್ಮಕತೆಯನ್ನು ಹೊರತೆಗೆಯುವುದು ಆಗಿದೆಯೆಂದು ನುಡಿದ್ದರು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕ ಅಧ್ಯಕ್ಷರು ಮಾಡನಾಡಿ ಇಂತಹ ಸ್ಪರ್ಧೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಅಭಿವ್ಯಕ್ತಿ ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ವೃದ್ಧಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತವೆ.
ಸಮ್ಮೇಳನದ ಯಶಸ್ವಿಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಆಯೋಜನಾ ಸಮಿತಿಯವರು ಶ್ರಮಿಸಿದರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸಾಪತ್ರ ಮತ್ತು ಬಹುಮಾನಗಳನ್ನು ನೀಡಲಾಗುವುದು ಎಂದು ತಿಳಿಸಲಾಯಿತು.
ಈ ಕಾರ್ಯಕ್ರಮದ ಮೂಲಕ ಚಿಟಗುಪ್ಪಾ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉತ್ತಮ ಪೂರ್ವಭಾವಿ ವಾತಾವರಣ ನಿರ್ಮಾಣಗೊಂಡಿದೆ.ಈ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
