ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಜನತಾ ದರ್ಶನ-ತಹಸೀಲ್ದಾರ್ ಪ್ರಶಾಂತ್ ಕೆ.ಪಾಟೀಲ್

ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಜನತಾ ದರ್ಶನ-ತಹಸೀಲ್ದಾರ್ ಪ್ರಶಾಂತ್ ಕೆ.ಪಾಟೀಲ್

:  ಸಚಿವ ಎಂ.ಸಿ.ಸುಧಾಕರ್ ಹಾಗೂ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಈ ಜನತಾ ದರ್ಶನ ನಡೆಸಲಿದ್ದಾರೆ. ಇದಕ್ಕಾಗಿ ತಹಶಿಲ್ದಾರ್ ಕಛೇರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ನಡೆಸಿದ್ದು,ತಹಶಿಲ್ದಾರ್ ಕಛೇರಿಯಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಣದ ಸಾರ್ವಜನಿಕರ ವಿವಿಧ ಸಮಸ್ಯೆ-ಅಹವಾಲುಗಳನ್ನು ತಾಲೂಕು ಮಟ್ಟದಲ್ಲಿ ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇಂದು ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರವರ ನೇತೃತ್ವದಲ್ಲಿ  ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಸಂಕೀರ್ಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಹಿಳೆಯರು,ಸಾರ್ವಜನಿಕರು ಹಾಗೂ ರೈತರು ಭಾಗವಹಿಸಿ ಜನತಾ ದರ್ಶನಾ ಸದುಪಯೋಗ ಪಡಿಸಿಕೊಳ್ಳಲು ತಹಸೀಲ್ದಾರ್ ಪ್ರಶಾಂತ್ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.