ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸದ್ಬಾವನಾ ದಿನಾಚರಣೆ
ಕೆಜಿಎಫ್,ಆ.೨೦: ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬುಧವಾರದಂದು ಬೆಳಿಗ್ಗೆ ೧೧ ಗಂಟೆಗೆ, ಕೋಮು ಸೌಹಾರ್ದತೆಯ ಪ್ರತೀಕವಾಗಿ ಸದ್ಬಾವನಾ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸದ್ಬಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡಿದರು. ಅಲ್ಲದೇ ವೈಯಕ್ತಿಕವಾಗಲೀ ಅಥವಾ ಸಾಮೂಹಿಕವಾಗಲೀ ನಮ್ಮಲ್ಲಿರುವ ಎಲ್ಲಾ ಬೇದ ಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಸಹ ಪ್ರತಿಜ್ಞೆ ಮಾಡಲಾಯಿತು.
ಡಿವೈಎಸ್ಪಿ ಎಸ್ ಪಾಂಡುರಂಗ, ಸಹಾಯಕ ಆಡಳಿತಾಧಿಕಾರಿ ಜಿ. ವಿಶ್ವನಾಥ, ಶಾಖಾಧೀಕ್ಷಕರಾದ ವಿ.ಗಿರೀಶ್, ನಜೀಮಾಬಾನು, ಆಪ್ತ ಸಹಾಯಕಿ ಜಿ.ಮಮತಾ, ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಲಿಪಿಕ ಸಿಬ್ಬಂದಿಗಳು ಹಾಜರಿದ್ದರು.
ಚಿತ್ರ ಶಿರ್ಷಿಕೆ: ೨೦ಕೆಜಿಎಫ್೦೧: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆದ ಸದ್ಬಾವನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಪಾಂಡುರಂಗ ಇತರರು
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
