ಜುಲೈ 27ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತಿ ಬೇತಮಂಗಲದಲ್ಲಿ ಕೆಂಪೇಗೌಡ ಅದ್ದೂರಿ ಆಚರಣೆಗೆ ನಿರ್ಧಾರ 

Jul 7, 2025 - 11:45
 0  8
ಜುಲೈ 27ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತಿ ಬೇತಮಂಗಲದಲ್ಲಿ ಕೆಂಪೇಗೌಡ ಅದ್ದೂರಿ ಆಚರಣೆಗೆ ನಿರ್ಧಾರ 
ಬೇತಮಂಗಲ: ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಜುಲೈ 27ಕ್ಕೆ ಬೇತಮಂಗಲದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಒಕ್ಕಲಿಗ ಸಮುದಾಯದಿಂದ ಒಮ್ಮತದಿಂದ ನಿರ್ಧಾರವನ್ನು ಕೈಗೊಳ್ಳಲಾಯಿತು.
ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದಲ್ಲಿ ಕೆಜಿಎಫ್ ತಾಲೂಕಿನ ವಿವಿಧ ಗ್ರಾಮಗಳ ಒಕ್ಕಲಿಗ ಸಮುದಾಯದ ಮುಖಂಡರು ಹಾಗೂ ಯುವಕರಿಂದ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು.
ಪ್ರತಿ ಗ್ರಾಮದಿಂದ ಪುಪ್ಪ ಪಲ್ಲಕ್ಕಿ:
ಕೆಜಿಎಫ್ ತಾಲೂಕಿನಲ್ಲಿ ಒಕ್ಕಲಿಗ ಸಮುದಾಯದ ಜನಾಂಗದವರು ವಾಸಿಸುತ್ತಿರುವ ಪ್ರತಿಯೊಂದು ಗ್ರಾಮದಿಂದಲ್ಲೂ ಪುಪ್ಪ ಪಲ್ಲಕ್ಕಿ ಉತ್ಸವದ ಮೂಲಕ ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಪಾಲ್ಗೊಳ್ಳಲು ಸೂಚಿಸಿದರು. ಅದೇ ರೀತಿ ಪಲ್ಲಕ್ಕಿಯ ಜೊತೆಗೆ ಸಮುದಾಯದವರು ಕುಟುಂಬ ಸಮೇತರಾಗಿ ಭಾಗವಹಿಸಲು ತಿಳಿಸಿದರು.
ಕಲಾ ತಂಡಗಳು, ತಮಟೆ ಮೆರುಗು:
ರಾಜ್ಯದ ರಾಜಧಾನಿ ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡರು ಜಯಂತಿ ಆಚರಣೆಯಲ್ಲಿ ಪುಪ್ಪ ಪಲ್ಲಕ್ಕಿ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ತಮಟೆ ವಾದ್ಯ ಹಾಗೂ ಚೆಂಡಿ ವಾದ್ಯಗಳ ಮೂಲಕ ಮೆರುಗು ತರುವುದಾಗಿ ಹೇಳಿದರು.
ಆರ್ಕೆಸ್ಟ್ರಾ ಮನರಂಜನಾ ಕಾರ್ಯಕ್ರಮ:
ಭಾನುವಾರ ಬೆಳಗ್ಗೆ ಯಿಂದಲೂ ಪಲ್ಲಕ್ಕಿ ಉತ್ಸವ ಮೆರವಣಿಗೆ ಮುಂಗಿದ ನಂತರ ಸಂಜೆಗೆ ಬೇತಮಂಗಲ ಬಸ್ ನಿಲ್ದಾಣದಲ್ಲಿ ಮನರಂಜನಾ ಆರ್ಕೆಸ್ಟ್ರಾ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ತಿಳಿಸಿದರು.
ಈ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ್, ಗ್ರಾಪಂ ಮಾಜಿ ಅಧ್ಯಕ್ಷ ಕಾರಿ ಪ್ರಸನ್ನ, ಮುಖಂಡರಾದ ನಲ್ಲೂರು ಶಂಕರ್, ವಿಜೇಂದ್ರ, ರಾಜಣ್ಣ, ಡೈರಿ ಮಂಜುನಾಥ್, ಲಕ್ಷ್ಮೀನಾರಾಯಣ, ಸೀನಪ್ಪ, ವಿಶ್ವನಾಥ್, ರವಿ, ಚೌಡಪ್ಪ, ಮುರಳಿ, ವೇಣು, ವೆಂಕಟಾಚಲಪತಿ, ಶಂಕರಪ್ಪ, ಪ್ರೆಸ್ ಮಂಜು, ನಂದೀಶ್, ಚಂದು, ಯಶ್ವಂತ್, ಸಾಗರ್, ಶ್ರೀನಾಥ್, ತರುಣ್, ಬಾಲಾಜಿ, ಚೌಡಪ್ಪ, ಪ್ರವೀಣ್ ಸೇರಿದಂತೆ ಮುಖಂಡರು, ಯುವಕರು ಪಾಲ್ಗೊಂಡಿದ್ದರು.
ಚಿತ್ರ 01 ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ ನಡೆಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456