ಟ್ರಾಫಿಕ್ ಪೊಲೀಸರಿಗೆ ಎ ಸಿ ಹೆಲ್ಮೆಟ್ ನೀಡಲು ತೇಜಸ್ವಿ ಮನವಿ

Apr 25, 2026 - 15:46
Apr 25, 2026 - 15:47
 0  4
ಟ್ರಾಫಿಕ್ ಪೊಲೀಸರಿಗೆ ಎ ಸಿ ಹೆಲ್ಮೆಟ್ ನೀಡಲು ತೇಜಸ್ವಿ ಮನವಿ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಮೈಸೂರು :- ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ಅಧಿಕವಾಗಿ, ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ ಹಾಗಾಗಿ

ಕಲಬುರ್ಗಿ ಮಾದರಿಯಲ್ಲಿ ಮೈಸೂರಿನ ಟ್ರಾಫಿಕ್ ಪೊಲೀಸರಿಗೆ ಎ ಸಿ ಹೆಲ್ಮೆಟ್ ನೀಡುವಂತೆ ನಗರ ಪೋಲಿಸ್ ಆಯುಕ್ತರಿಗೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಮನವಿ ಮಾಡಿದ್ದಾರೆ.

ಮೈಸೂರು ನಗರ ಭಾಗಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿರುವುದು ತಿಳಿದಿರುವ ವಿಷಯ. ಪ್ರಸ್ತುತ ದಿನಗಳಲ್ಲಿ ಬೇಸಿಗೆಯ ಕಾರಣ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ಬೇಸಿಗೆಯ ಬಿರು ಬಿಸಿಲಿನ ಬೇಗೆಯಲ್ಲಿ ಕೂಡ ಸುಗಮ ಸಂಚಾರಕ್ಕಾಗಿ ಮೈಸೂರು ಪೋಲಿಸರು ದಿನನಿತ್ಯ ರಸ್ತೆಯಲ್ಲಿ ನಿಂತು ಕಾರ್ಯ ನಿರ್ವಹಿಸುತ್ತಿರುವುದನ್ನು ಕಾಣುತ್ತೇವೆ ಅವರ ಪಾಡು ಕೇಳುವವರೇ ಇಲ್ಲ ಎಂದು ತೇಜಸ್ವಿ ಬೇಸರ ಪಟ್ಟಿದ್ದಾರೆ.

ಟ್ರಾಫಿಕ್ ಪೊಲೀಸರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಮಾನವೀಯ ದೃಷ್ಟಿಯಿಂದ ನಗರ ಪೋಲಿಸ್ ಆಯುಕ್ತರು ಬೇಸಿಗೆ ಮುಗಿಯುವವರೆಗೂ ಕಲಬುರ್ಗಿ ಪೊಲೀಸರ ಮಾದರಿಯಲ್ಲಿ ಮೈಸೂರಿನ ಟ್ರಾಫಿಕ್ ಪೊಲೀಸರಿಗೆ ಎ ಸಿ ಹೆಲ್ಮೆಟ್ ಗಳನ್ನು ನೀಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಕೋರಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456