ಡಾ. ಸಿದ್ಧಲಿಂಗೇಶ ಹಂಡಿಗಿ ಅವರಿಗೆ "ಸೇವಾ ಸ್ಫೂರ್ತಿ" ರಾಜ್ಯ ಪ್ರಶಸ್ತಿ
ನವಲಗುಂದ: ಸಾಹಿತಿ, ಶಿಕ್ಷಕ ಡಾ. ಸಿದ್ಧಲಿಂಗೇಶ ಸಂ. ಹಂಡಿಗಿ ಅವರಿಗೆ " ಸೇವಾ ಸ್ಫೂರ್ತಿ " ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಪರಿಷತ್ತು, ಭಾರತ ಜ್ಞಾನ ವಿಜ್ಞಾನ ಸಮಿತಿ, ಪರಿಸರ ಪ್ರೇಮ ತಂಡ ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಜರುಗಿದ ಅದ್ದೂರಿ ಕಾರ್ಯಕ್ರಮದಲ್ಲಿ ಡಾ ಹಂಡಿಗಿ ಅವರಿಗೆ ಶಿಕ್ಷಣ, ಸಾಹಿತ್ಯ, ಸಂಸ್ಕೃತಿ, ಪರಿಸರ ಜಾಗೃತಿ ಹಾಗೂ ಸಾಮಾಜಿಕ ಸೇವೆ ಪರಿಗಣಿಸಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಅಖಿಲ ಭಾರತ ಶಿಕ್ಷಕರ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ, ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಫ್. ಸಿ. ಚೇಗರಡ್ಡಿ, ಜಿಲ್ಲಾ ಅಧ್ಯಕ್ಷ ಗುರು ತಿಗಡಿ, ಪರಿಸರ ಪ್ರೇಮ ತಂಡದ ಸಂಚಾಲಕ ಎಲ್. ಐ.ಲಕ್ಕಮ್ಮನವರ, ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷೆ ಶ್ರೀಮತಿ ರಮಾ ಆರ್. ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪರ್ವೀನ್ ಭಾನು ಬುಳ್ಳಣ್ಣವರ, ಕೋಶಾಧ್ಯಕ್ಷ ಎಂ.ಆರ್.ಮಲ್ಲಿಕಾರ್ಜುನ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲಿಂಗರಾಜ ಅಂಗಡಿ,ಡಯಟ್ ನ ನಿವೃತ್ತ ಉಪನ್ಯಾಸಕ ಕೆ.ಜಿ.ದೇವರಮನಿ, ಪ್ರಮುಖರಾದ ರಾಜಶೇಖರ ಹೊನ್ನಪ್ಪನವರ, ಶಂಕರ ಘಟ್ಟಿ ಮತ್ತಿತರರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
