ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ ನೇತೃತ್ವದಲ್ಲಿ ಕೋವಿಡ್ ತುರ್ತು ಕಾರ್ಯಪಡೆ ಸಭೆ
ಬಾಗೇಪಲ್ಲಿ: ಕೊರೊನಾ ಕಾರ್ಯಪಡೆಯ ಸದಸ್ಯರು ಹಾಗೂ ನೋಡಲ್ ಅಧಿಕಾರಿಗಳು ಸೋಂಕು ನಿಯಂತ್ರಿಸಲು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ತಹಸೀಲ್ದಾರ್ ಮನಿಷಾ ಮಹೇಶ್ ಪತ್ರಿ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಪಟ್ಟಣ ಮತ್ತು ಗ್ರಾಮೀಣ (ಟಾಸ್ಕ್ಪೋರ್ಸ್ ) ಕಾರ್ಯಪಡೆಗಳ ನೋಡಲ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ತಾಲೂಕಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಪಟ್ಟಣದ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಕಾರ್ಯಪಡೆಯನ್ನು ರಚಿಸಲಾಗಿದೆ. ಜೊತೆಗೆ ಕಾರ್ಯಪಡೆಯ ನಿರ್ವಹಣೆಗೆಂದು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಕೊರೊನಾ ಕಾರ್ಯಪಡೆಯ ಸದಸ್ಯರು ಹಾಗೂ ನೋಡಲ್ ಅಧಿಕಾರಿಗಳು ಸೋಂಕು ನಿಯಂತ್ರಿಸಲು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಹಾಗೂ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ವಿವಿಧ ರೀತಿಯ ಮುoಜಾಗೃತ ಕ್ರಮಗಳನ್ನು ಕೈಗೊಂಡಿದ್ದು ಕೋವಿಡ್ ಗೆಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಕಾರ್ಯಪಡೆ ಸಿಬ್ಬಂದಿ ಮತ್ತು ನೋಡಲ್ ಅಧಿಕಾರಿಗಳು ಎಚ್ಚರ ವಹಿಸಿ ಅಪಡೇಟ್ ಮಾಡಬೇಕು ಎಂದರು..
ಈ ಸಭೆಯಲ್ಲಿ ತಾಲ್ಲೂಕು ಅರೋಗ್ಯ ಆಡಳಿತಧಿಕಾರಿ ಸತ್ಯನಾರಾಯಣರೆಡ್ಡಿ,ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಿ.ವಿ.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ,ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ,ಸಿ.ಡಿ.ಪಿ.ಓ ರಾಮಚಂದ್ರ, ಸೇರಿದಂತೆ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು,ನೋಡಲ್ ಅಧಿಕಾರಿಗಳು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
