ತೆಳ್ಳನೂರು ಗ್ರಾಮದಲ್ಲಿ ಶನೇಶ್ವರನ ಉತ್ಸವ ಬಹಳ ವಿಗ್ರಹಣೆಯಿಂದ ಜರುಗಿತು

Aug 10, 2025 - 11:16
Sep 24, 2025 - 11:17
 0  1
ತೆಳ್ಳನೂರು ಗ್ರಾಮದಲ್ಲಿ ಶನೇಶ್ವರನ  ಉತ್ಸವ ಬಹಳ ವಿಗ್ರಹಣೆಯಿಂದ ಜರುಗಿತು

ಸಂತೆಮರಹಳ್ಳಿ : ಸಮೀಪದ ತೆಳ್ಳನೂರು ಗ್ರಾಮದಲ್ಲಿ ಶ್ರಾವಣ ಮಾಸದ ಮೂರನೇ ಶನಿವಾರದಲ್ಲಿ ಶ್ರೀ ಶನೇಶ್ವರನ ಉತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.

ಶ್ರೀ ಶನಿಮಹಾತ್ಮನ ಫೋಟೋ ಇಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

 ವಿವಿಧ ಹೂಗಳಿಂದ ಶೃಂಗಾರಮಾಡಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವ ಪಲ್ಲಕ್ಕಿಯ ಮೇಲೆ ಶನಿಮಹಾತ್ಮನ ದರ್ಶನ ಪಡೆಯಲು ಭಕ್ತಾದಿಗಳು ಸಾಲುಸರದಿಯಲ್ಲಿ ನಿಂತಿರುವುದು ಬಹಳ ವಿಶೇಷವಾಗಿತ್ತು. 

 ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಹಾಗೂ ಡೋಲು ವಾದ್ಯಗಳ ಸಮೇತ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಭಕ್ತಾದಿಗಳು ಮೆರವಣಿಗೆ ಮುಖಾಂತರ ಸಾಗಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು.

  ಗ್ರಾಮದ ಮುಖಂಡ ಪೂಜಾರಿ ಕುಮಾರ್ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಮೂರನೇ ಶನಿವಾರದಲ್ಲಿ ಶನಿ ಮಹಾತ್ಮನ ಫೋಟೋ ಇಟ್ಟು ಪೂಜೆ ಮಾಡುವುದು ವಿಶೇಷವಾಗಿದೆ ಈ ವರ್ಷ ಮಳೆರಾಯ ಅನುಗ್ರಹದಿಂದ ಅಧಿಕ ಮಳೆಯಾಗಿದ್ದು ಗ್ರಾಮದ ರೈತರು ಸಂತೋಷದಿಂದ ಇರುವುದು ಬಹಳ ವಿಶೇಷವಾಗಿದೆ.

ಹಾಗಾಗಿ ಆ ದೇವರ ಮಹಿಮೆಗೆ ಎಲ್ಲರೂ ಪಾತ್ರರಾಗಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456